ಉಡುಪಿ :ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನೀಲಾವರಗೋಶಾಲೆಯಲ್ಲಿ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ ಅಂಗವಾಗಿ ಮತ್ತುಇತ್ತೀಚೆಗೆ ರಾಜ್ಯ ಸರಕಾರ ಜಾರಿಗೆ ತಂದ ಗೋಹತ್ಯೆ ನಿಷೇದಕಾಯ್ದೆಯನ್ನು ಸ್ವಾಗತಿಸಿ ಗೋಶಾಲೆಯನ್ನು ಸ್ವಚ್ಛಗೊಳಿಸಿ, ಗೋಪೂಜೆ ಮಾಡುವ ಮೂಲಕ ಆಚರಿಸಿದರು.
ಯುವಮೋರ್ಚಾಜಿಲ್ಲಾಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ಮಾತನಾಡಿ ಅಟಲ್ಜೀ ಕೇವಲ ಅಜಾತ ಶತ್ರುಅಲ್ಲ,ನಿಜಾರ್ತದಲ್ಲಿ ವಿಶ್ವ ಮಾನವಎಂಬುವುದಕ್ಕೆಅವರ ನಡೆ ನುಡಿಸಾಕ್ಷಿ. ಅತ್ಯಂತ ಸರಳ ಜೀವನ ಶೈಲಿ ಅಳವಡಿಸಿಕೊಂಡಿದ್ದ ವಾಜಪೇಯಿ ಅವರು ಯಾರ ಮನಸ್ಸನ್ನು ನೋವಿಸಿದವರಲ್ಲ. ಪ್ರತಿಪಕ್ಷಗಳನ್ನು ಸಹ ಗೌರವಯುತವಾಗಿ ಕಾಣುತ್ತಿದ್ದಅವರನ್ನುಅಜಾತ ಶತ್ರು ಎಂದು ದೇಶದ ಜನತೆ ಕರೆಯುತ್ತಿದ್ದರು ಎಂದರು.
ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಕುಮಾರಿ ಶ್ವೇತಾರವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಅಟಲ್ಜೀಯವರು ದೇಶದಲ್ಲಿ ಗೋಹತ್ಯೆನಿಷೇದ ಆಗುವ ಬಗ್ಗೆ ಬಹಳ ಪ್ರಯತ್ನ ಪಟ್ಟಿದ್ದರು. ಇಂದಿನ ಸಮಯದಲ್ಲಿ ರಾಜ್ಯ ಸರಕಾರ ಜಾರಿಗೆ ತಂದ ಗೋಹತ್ಯೆ ನಿಷೇದದಿಂದ ಸ್ವರ್ಗಿಯ ಶ್ರೀಯುತ ಅಟಲ್ ಬಿಹಾರಿ ವಾಜಪೇಯಿಯವರ ಅಂದಿನ ಪ್ರಯತ್ನಇವತ್ತು ಸಾಕಾರಗೊಂಡಿರುವುದಕ್ಕೆ ಗೋಪ್ರೇಮಿಗಳು ಸಂತಸವ್ಯಕ್ತಪಡಿಸಿರುತ್ತಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಪ್ರಧಾನ ಕಾರ್ಯದರ್ಶಿಗಳಾದ ಶರತ್ಶೆಟ್ಟಿ ಉಪ್ಪುಂದ, ವಿನೋದ್ ಪೂಜಾರಿ ಶಾಂತಿನಿಕೇತನ, ಕಾರ್ಯದರ್ಶಿ ಅಭಿರಾಜ್ ಸುವರ್ಣ ಮತ್ತು ಇನ್ನಿತರ ಯುವಮೋರ್ಚಾ ಜಿಲ್ಲಾ ಮತ್ತು ಮಂಡಲ ಪಧಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…