ಉಡುಪಿ: ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ತುಚ್ಛವಾಗಿ ಮಾತಾಡಿ ಬಿಜೆಪಿಗರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡಲು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಪು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೌರೀಶ್ ಕೋಟ್ಯಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವರು ಹಾಗೂ ಮಾಜಿ ಶಾಸಕರ ಬಗ್ಗೆ ಕೆಲವು ದಿನಗಳ ಹಿಂದೆ ಆಧಾರ ರಹಿತ ಆರೋಪವನ್ನು ಮಾಡಿ ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ರಾಜ್ಯ ಯುವ ಕಾಂಗ್ರೆಸ್ ಸಮಿತಿಯಿಂದ ಎಚ್ಚರಿಕೆಯನ್ನು ನೀಡಲಾಗಿತ್ತು.
ಕಾರ್ಕಳ ವಿಧಾನಸಭಾ ಕ್ಷೇತ್ರದ ಉತ್ಸಾಹಿ ನಾಯಕರಾದ ಮುನಿಯಾಲು ಉದಯ್ ಶೆಟ್ಟಿ ಅವರ ಸಂಪೂರ್ಣ ಬೆಂಬಲದಿಂದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷನಾದದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಕೊಡಲಿಯ ಕಾವು ಕುಲಕ್ಕೆ ಮೃತ್ಯು ಎಂಬಂತೆ ತಾನು ಬೆಳೆಯಲು ಅವಕಾಶವನ್ನು ಕಲ್ಪಿಸಿಕೊಟ್ಟ ನಾಯಕನ ವಿರುದ್ಧವೇ ಅಪಪ್ರಚಾರ ಮಾಡಲು ಹೊರಟಿರುವ ಕೃಷ್ಣ ಶೆಟ್ಟಿ ಬಜಗೋಳಿ ಇದೀಗ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಬಗ್ಗೆ ಮಾತನಾಡಿದ್ದು ಕಾಂಗ್ರೆಸ್ ಪಕ್ಷಕ್ಕೆ ಮಾರಕವಾಗುವಂತಿದೆ.
ಈ ಕೂಡಲೇ ಈ ತುರ್ತು ಪರಿಸ್ಥಿತಿಯನ್ನು ಪಕ್ಷದ ವರಿಷ್ಠರು, ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ನ ರಾಜ್ಯ ಉಸ್ತುವಾರಿಗಳು ಗಂಭೀರವಾಗಿ ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಕಾಪು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೌರೀಶ್ ಕೋಟ್ಯಾನ್ ಅವರು ಮಾಧ್ಯಮಗಳ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…