Featured

ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಶ್ರೀ ಸುನಿಲ್ ಕುಮಾರ್ ಸೂಚನೆ – Vishwanews24

ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ  ಶ್ರೀ ಸುನಿಲ್ ಕುಮಾರ್ ಸೂಚನೆ

ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಸುನಿಲ್ ಕುಮಾರ್ ಇವರಿಂದ ಅಧಿಕಾರಿಗಳಿಗೆ ಸೂಚನೆ.

ಇಂದು ಮಾರ್ಚ್ 30ರಂದು ಬೆಂಗಳೂರು ವಿಧಾನ ಸೌಧದಲ್ಲಿ ಉಡುಪಿ ಶಾಸಕರಾದ ಶ್ರೀ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಭಾಜಪದ ಅಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು ಇವರುಗಳೊಂದಿಗೆ ರಂಗಭೂಮಿ (ರಿ.) ಉಡುಪಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಸೇರಿದಂತೆ ತಂಡವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಸುನಿಲ್ ಕುಮಾರ್ ಇವರನ್ನು ಭೇಟಿಯಾಗಿ ಉಡುಪಿ ಜಿಲ್ಲಾ ರಂಗಮಂದಿರದ ನಿರ್ಮಾಣದ ತುರ್ತು ಅಗತ್ಯತೆಯನ್ನು ತಿಳಿಸಿದಾಗ, ಮಾನ್ಯ ಸಚಿವರು ಈ ಕೂಡಲೇ, ಆರಂಭಿಕವಾಗಿ ರೂ ಎರಡು ಕೋಟಿ ಅನುದಾನಗಳನ್ನು ಇಲಾಖೆಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಹಾಗೂ ಸುಮಾರು 12 ವರ್ಷದ ಹಿಂದೆಯೇ ಸರ್ಕಾರದಿಂದ ಬಿಡುಗಡೆ ಆಗಿ ಉಡುಪಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇರುವ ರೂ 50 ಲಕ್ಷ ಅನುದಾನದೊಂದಿಗೆ ಜಿಲ್ಲಾ ರಂಗಮಂದಿರ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಉಡುಪಿ ಜಿಲ್ಲೆಯ ಸಮಸ್ತ ಕಲಾವಿದರ, ಕಲಾಪ್ರೇಮಿಗಳ ಕನಸು ನನಸಾಗುವತ್ತ ಸದ್ಯದಲ್ಲೇ ಸಾಗಲಿದೆ ಎಂಬ ಸಂಭ್ರಮದ ವಿಚಾರವನ್ನು ತಮಗೆಲ್ಲರಿಗೂ ತಿಳಿಸಲು ಬಹಳ ಸಂತೋಷ ಪಡುತ್ತಿದ್ದೇನೆ.ಜಿಲ್ಲಾ ರಂಗಮಂದಿರ ಬೇಡಿಕೆಗೆ ಧ್ವನಿಗೂಡಿಸಿದ ಉಡುಪಿ ಶಾಸಕರಾದಿ ಎಲ್ಲಾ ನಾಯಕರುಗಳಿಗೆ ಮಗದೊಮ್ಮೆ ಧನ್ಯವಾದ. ಸಚಿವರ ಆದೇಶವನ್ನ ಮೂರ್ತರೂಪಕ್ಕೆ ತರುವಲ್ಲಿ ಅಧಿಕಾರಿಗಳು ತುರ್ತಾಗಿ ಶೃಮಿಸಲಿ ಎಂದು ಆಶಿಸುತ್ತೇನೆ.

– ಪ್ರದೀಪ್ ಚಂದ್ರ ಕುತ್ಪಾಡಿ
ಪ್ರಧಾನ ಕಾರ್ಯದರ್ಶಿ
ರಂಗಭೂಮಿ (ರಿ.) ಉಡುಪಿ

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

17 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

17 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

17 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

18 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

18 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago