Featured

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯುವುದು ಕಡ್ಡಾಯ : ಜಿಲ್ಲಾದಿಕಾರಿ ಕೂರ್ಮಾರಾವ್ ಎಂ. – Vishwanews24

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯಬೇಕು: ಜಿಲ್ಲಾದಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ಸಭೆ ಸಮಾರಂಭಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸುವ ಮುನ್ನ ಸ್ಥಳೀಯ ಸಂಸ್ಥೆಗಳು ಅಥವಾಗ್ರಾಮ ಪಂಚಾಯತ್ ನಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ತಪ್ಪಿದಲ್ಲಿಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಮಾನ್ಯವಾಗಿ ಯಾವುದೇ ಪ್ರಚಾರ ಫಲಕಗಳು ಭಿತ್ತಿಪತ್ರಗಳು ಕರಪತ್ರಗಳು ಧ್ವನಿವರ್ಧಕಗಳ ಬಳಕೆ ಸೇರಿದಂತೆ ಮತ್ತಿತರ ಪ್ರಚಾರ ಕೈಗೊಳ್ಳುವ ಮುನ್ನನಿಗಧಿತ ಪ್ರಾಧಿಕಾರದಿಂದ ಕಾನೂನುನಡಿಯಲ್ಲಿಅವಶ್ಯವಿರುವ ಅನುಮತಿ ಪತ್ರವನ್ನು ಪಡೆದು ಕಾರ್ಯಗತಗೊಳಿಸಬೇಕು. ಒಂದೊಮ್ಮೆ ಉಲ್ಲಂಘಿಸಿ ನಡೆದುಕೊಂಡಲ್ಲಿಅಂತಹವರ ವಿರುದ್ದ ಕಾನೂನಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಯಾವುದೇ ರೀತಿಯ ಪ್ರಚಾರ ಫಲಕಗಳು ಸೇರಿದಂತೆ ಮತ್ತಿತರ ಪ್ರಚಾರ ಸಾಮಗ್ರಿಗಳನ್ನು ಅನುಮತಿ ಪಡೆದು ಬಳಸಿದ್ದಲ್ಲಿ, ಅನುಮತಿಯ ಕಾಲಾವಧಿ ಮುಗಿದ ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದ ಅವರು ಯಾವುದೇ ಸಭೆ ಸಮಾರಂಭ ಮೆರವಣಿಗೆ ನಡೆಸಲು ಅನುಮತಿ ತೆಗೆದುಕೊಳ್ಳುವುದು ಕಡ್ಡಾಯ ಎಂದರು.

ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ನೊಂದಾವಣಿ ಆಗಿದೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಬೇಕು , ಹೆಸರು ಬಿಟ್ಟು ಹೋದಲ್ಲಿ ಕೂಡಲೇ ಹೆಸರು ನೊಂದಾಯಿಸಿಕೊಳ್ಳಬೇಕು, ಮುಂದಿನ ವಾರದಲ್ಲಿ ಬಿ.ಎಲ್.ಓ ಗಳು ಹಾಗೂ ಚುನಾವಣಾ ಏಜೆಂಟರುಗಳ ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಯಾವುದೇ ರೀತಿ ಗೊಂದಲಗಳಿದ್ದಲ್ಲಿ ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಪ್ರತಿ ಮತದಾನದ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿ ಒಂದೊಮ್ಮೆ ಯಾವುದೇ ಸೌಕರ್ಯಗಳ ಕೊರತೆಯಿದ್ದಲ್ಲಿ ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕು ಎಂದ ಅವರು ಈ ಬಾರಿ ವಿಶೇಷವಾಗಿ 80 ವರ್ಷ ಮೇಲ್ಪಟ್ಟವರು ಮತ್ತು ವಿಶೇಷ ಚೇತನರಿಗೆ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ,ಅಪರಜಿಲ್ಲಾಧಿಕಾರಿ ವೀಣಾ, ತಾಲೂಕು ಚುನಾವಣಾ ಅಧಿಕಾರಿಗಳು ಹಾಗೂ ವಿವಿಧರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago