ಉಡುಪಿ : ಪ್ರವಾಹ ಪರಿಹಾರ ನಿಧಿಯಾಗಿ ಉಡುಪಿ ಜಿಲ್ಲೆಗೆ 40 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ (ಸಿಎಂ) ಬಿ ಎಸ್ ಯಡಿಯೂರಪ್ಪ ಅವರು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಜಿಲ್ಲೆಯ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, , ಲಾಲಾಜಿ ಆರ್ ಮೆಂಡನ್, ವಿ ಸುನಿಲ್ ಕುಮಾರ್ ಹಾಗೂ ಬಿ ಎಂ ಸುಕುಮಾರ್ ಶೆಟ್ಟಿ ಅವರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ನೈಸರ್ಗಿಕ ವಿಕೋಪಕ್ಕೆ ಒಳಗಾದ ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಇಲಾಖಾ ಹಣಕಾಸು ವಿಭಾಗದ ಪ್ರಧಾನ ಕಾರ್ಯದರ್ಶಿ ಐ ಎಸ್ ಎನ್ ಪ್ರಸಾದ್ ಅವರಿಗೆ ಮೊದಲ ಹಂತದಲ್ಲಿ 40 ಕೋಟಿ ರೂ. ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ಹಾಗೆಯೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ, ನೈಸರ್ಗಿಕ ವಿಕೋಪದಿಂದ ಜಿಲ್ಲೆಗೆ ಆಗಿರುವ ನಷ್ಟದ ಬಗ್ಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.
ಆಟೋ ಮತ್ತು ಟ್ಯಾಕ್ಸಿ ಡ್ರೈವರ್ಗಳಿಗೆ ಸರ್ಕಾರ ನೀಡಿರುವ ಹಣಕಾಸಿನ ನೆರವು ಪಡೆಯುವಲ್ಲಿ ತಾಂತ್ರಿಕ ತೊಂದರೆಗಳು ಎದುರಾಗಿವೆ. ಈ ಸಮಸ್ಯೆಯ ಬಗ್ಗೆ ಗಮನಹರಿಸಬೇಕು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸಲಾಯಿತು” ಎಂದು ಭಟ್ ಹೇಳಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…