ಉಡುಪಿ : ಪ್ರವಾಹ ಪರಿಹಾರ ನಿಧಿಯಾಗಿ ಉಡುಪಿ ಜಿಲ್ಲೆಗೆ 40 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ (ಸಿಎಂ) ಬಿ ಎಸ್ ಯಡಿಯೂರಪ್ಪ ಅವರು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಜಿಲ್ಲೆಯ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, , ಲಾಲಾಜಿ ಆರ್ ಮೆಂಡನ್, ವಿ ಸುನಿಲ್ ಕುಮಾರ್ ಹಾಗೂ ಬಿ ಎಂ ಸುಕುಮಾರ್ ಶೆಟ್ಟಿ ಅವರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ನೈಸರ್ಗಿಕ ವಿಕೋಪಕ್ಕೆ ಒಳಗಾದ ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಇಲಾಖಾ ಹಣಕಾಸು ವಿಭಾಗದ ಪ್ರಧಾನ ಕಾರ್ಯದರ್ಶಿ ಐ ಎಸ್ ಎನ್ ಪ್ರಸಾದ್ ಅವರಿಗೆ ಮೊದಲ ಹಂತದಲ್ಲಿ 40 ಕೋಟಿ ರೂ. ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ಹಾಗೆಯೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ, ನೈಸರ್ಗಿಕ ವಿಕೋಪದಿಂದ ಜಿಲ್ಲೆಗೆ ಆಗಿರುವ ನಷ್ಟದ ಬಗ್ಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.
ಆಟೋ ಮತ್ತು ಟ್ಯಾಕ್ಸಿ ಡ್ರೈವರ್ಗಳಿಗೆ ಸರ್ಕಾರ ನೀಡಿರುವ ಹಣಕಾಸಿನ ನೆರವು ಪಡೆಯುವಲ್ಲಿ ತಾಂತ್ರಿಕ ತೊಂದರೆಗಳು ಎದುರಾಗಿವೆ. ಈ ಸಮಸ್ಯೆಯ ಬಗ್ಗೆ ಗಮನಹರಿಸಬೇಕು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸಲಾಯಿತು” ಎಂದು ಭಟ್ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…