ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ: ಹೆಜಮಾಡಿಯಲ್ಲಿ ಅದ್ದೂರಿಯ ಸ್ವಾಗತ

Featured, ಉಡುಪಿ

ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ: ಹೆಜಮಾಡಿಯಲ್ಲಿ ಅದ್ದೂರಿಯ ಸ್ವಾಗತ

ಕಾಪು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲೆಯ ಗಡಿಭಾಗದ ಹೆಜಮಾಡಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖಾ ಸಚಿವ ವಿ ಸುನಿಲ್ ಕುಮಾರ್,ಶಾಸಕರಾದ ಲಾಲಾಜಿ ಆರ್ ಮೆಂಡನ್,ಬಿಜೆಪಿ ಜಿಲ್ಲಾದ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ರಾಷ್ಟ್ರೀಯ ಬಿಜೆಪಿ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸುರೇಶ್ ಗುರ್ಮೆ,ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ಗೀತಾಂಜಲಿ ಸುವರ್ಣ, ಮೊದಲಾದವರು ಉಪಸ್ಥಿತರಿದ್ದರು.