ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ ಆಗಮಿಸಲಿದ್ದ ಬಜರಂಗದಳದ ಪ್ರಮುಖರಾದ ಪುನೀತ್ ಅತ್ತಾವರ ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರಿಗೆ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿರುವ ಕ್ರಮವನ್ನು ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸಿದೆ.
ದೇಶ ವಿಭಜನೆಯ ಇತಿಹಾಸವನ್ನು ಜನರಿಗೆ ತಿಳಿಸಿ, ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ. ಇಂತಹ ಕ್ರಮಗಳಿಂದ ಹಿಂದೂಗಳ ಧ್ವನಿಯನ್ನು ಅಡಗಿಸಿ, ಹಿಂದುತ್ವದ ಕಾರ್ಯದಿಂದ ವಿಮುಖರನ್ನಾಗಿಸಬಹುದು ಎಂಬುದು ಮೂರ್ಖತನ ಎಂದು ವಿಹಿಂಪ ತಿಳಿಸಿದೆ.
ಇಂತಹ ಹಲವು ನಿರ್ಬಂಧ ಹಾಗೂ ನಿಷೇಧಗಳನ್ನು ಎದುರಿಸಿಯೇ ವಿಶ್ವ ಹಿಂದೂ ಪರಿಷದ್ ದೇಶಾದ್ಯಂತ ತನ್ನ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದೆ. ಹಿಂದೂ ವಿರೋಧಿ ಧೋರಣೆಗಳನ್ನು ಜಿಲ್ಲಾಡಳಿತ ಕೈಬಿಡಬೇಕು ಹಾಗೂ ವಿಧಿಸಿರುವ ನಿರ್ಬಂಧಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.
ಈ ಕುರಿತು ವಿಶ್ವ ಹಿಂದೂ ಪರಿಷತ್ತಿನ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಕಟಪಾಡಿ: ಮಟ್ಟು ಬೀಚ್ನಲ್ಲಿ ಮುಂದುವರಿದ ಕಡಲ್ಕೊರೆತ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್ನಲ್ಲಿ ಕಡಲ್ಕೂರೆತ ಮುಂದುವರಿದಿದೆ.…
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…