ಉಡುಪಿ(Vishwanews24): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯನ್ನು ಕೊರೋನಾದಿಂದ ಮುಕ್ತಗೊಳಿಸುವ
ಸಲುವಾಗಿ ಸಾರ್ವಜನಿಕರು ಕೊರೋನಾ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಜಿಲ್ಲೆಯ ಜನತೆಯಲ್ಲಿ ಮನವಿ
ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೋವಿಡ್ ತಡೆಗಟ್ಟುವ
ಸಲುವಾಗಿ ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕು. ಶುಕ್ರವಾರದಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ವಿತರಿಸಲಾಗುತ್ತಿದ್ದು, ಈ
ಲಸಿಕೆಯಿಂದ ಯಾವುದೇ ರೀತಿಯ ಅಪಾಯ ಉಂಟಾಗುವುದಿಲ್ಲ. ಆದ್ದರಿಂದ ಸಾರ್ವಜನಿಕರು ಲಸಿಕೆ ಕುರಿತು ಯಾವುದೇ ಭಯಪಡದೆ
ಪಡೆದುಕೊಳ್ಳುಬೇಕು. ಈ ಮೂಲಕ ಕೊರೋನಾವನ್ನು ಜಿಲ್ಲೆಯಿಂದ ಹೊಡೆದೋಡಿಸಲು ಸಹಕಾರ ನೀಡಿದಂತಗುತ್ತದೆ ಎಂದರು.
ಇದೇ ವೇಳೆ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ಹೊರ ರಾಜ್ಯಗಳಿಂದ ಬರುವವರಿಗೆ ಯಾವುದೇ ನಿರ್ಭಂಧವಿಲ್ಲ ಆದರೆ ಮಹಾರಾಷ್ಟ್ರ
ಮತ್ತು ಕೇರಳದಿಂದ ಬರುವವರಿಗೆ ಆಕ್ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿದೆ. ಎಂಐಟಿ ಕ್ಯಾಂಪಸ್ನಲ್ಲಿ 1000 ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದ
ಹಿನ್ನೆಲೆಯಲ್ಲಿ ಕ್ಯಾಂಪಸ್ ನ್ನು ಸೀಲ್ ಡೌನ್ ಮಾಡಲಾಗಿದೆ. ಇದರೊಂದಿಗೆ ಮಾಂಡವಿ ಅಪಾಟ್ರ್ಮೆಂಟ್ ನ್ನು ಕೂಡಾ ಸೀಲ್ ಡೌನ್ ಮಾಡಲಾಗಿದ್ದು, ಹೆಚ್ಚು
ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಪ್ರದೇಶಗಳನ್ನು ಅಲ್ಲಿಯೇ ಸೀಲ್ ಡೌನ್ ಮಾಡಿ ಕಂಟೈನ್ ಮಾಡುವ ಕೆಲಸ ನಡೆಯುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…