ಉಡುಪಿ(Vishwanews24): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯನ್ನು ಕೊರೋನಾದಿಂದ ಮುಕ್ತಗೊಳಿಸುವ
ಸಲುವಾಗಿ ಸಾರ್ವಜನಿಕರು ಕೊರೋನಾ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಜಿಲ್ಲೆಯ ಜನತೆಯಲ್ಲಿ ಮನವಿ
ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೋವಿಡ್ ತಡೆಗಟ್ಟುವ
ಸಲುವಾಗಿ ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳಬೇಕು. ಶುಕ್ರವಾರದಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ವಿತರಿಸಲಾಗುತ್ತಿದ್ದು, ಈ
ಲಸಿಕೆಯಿಂದ ಯಾವುದೇ ರೀತಿಯ ಅಪಾಯ ಉಂಟಾಗುವುದಿಲ್ಲ. ಆದ್ದರಿಂದ ಸಾರ್ವಜನಿಕರು ಲಸಿಕೆ ಕುರಿತು ಯಾವುದೇ ಭಯಪಡದೆ
ಪಡೆದುಕೊಳ್ಳುಬೇಕು. ಈ ಮೂಲಕ ಕೊರೋನಾವನ್ನು ಜಿಲ್ಲೆಯಿಂದ ಹೊಡೆದೋಡಿಸಲು ಸಹಕಾರ ನೀಡಿದಂತಗುತ್ತದೆ ಎಂದರು.
ಇದೇ ವೇಳೆ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ಹೊರ ರಾಜ್ಯಗಳಿಂದ ಬರುವವರಿಗೆ ಯಾವುದೇ ನಿರ್ಭಂಧವಿಲ್ಲ ಆದರೆ ಮಹಾರಾಷ್ಟ್ರ
ಮತ್ತು ಕೇರಳದಿಂದ ಬರುವವರಿಗೆ ಆಕ್ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿದೆ. ಎಂಐಟಿ ಕ್ಯಾಂಪಸ್ನಲ್ಲಿ 1000 ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದ
ಹಿನ್ನೆಲೆಯಲ್ಲಿ ಕ್ಯಾಂಪಸ್ ನ್ನು ಸೀಲ್ ಡೌನ್ ಮಾಡಲಾಗಿದೆ. ಇದರೊಂದಿಗೆ ಮಾಂಡವಿ ಅಪಾಟ್ರ್ಮೆಂಟ್ ನ್ನು ಕೂಡಾ ಸೀಲ್ ಡೌನ್ ಮಾಡಲಾಗಿದ್ದು, ಹೆಚ್ಚು
ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಪ್ರದೇಶಗಳನ್ನು ಅಲ್ಲಿಯೇ ಸೀಲ್ ಡೌನ್ ಮಾಡಿ ಕಂಟೈನ್ ಮಾಡುವ ಕೆಲಸ ನಡೆಯುತ್ತಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…