Featured

ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಭಾರಿಗೆ ಯೋಧರ ಶ್ರೇಯಸ್ಸಿಗಾಗಿ ಸಾಯಿ ಧುನಿ ಆರಾಧನೆ

 

 

ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಭಾರಿಗೆ ಯೋಧರ ಶ್ರೇಯಸ್ಸಿಗಾಗಿ ಸಾಯಿ ಧುನಿ ಆರಾಧನೆ

ಕಟಪಾಡಿ: ಶಂಕರಪುರದ ಸಾಯಿ ಸಾಂತ್ವನ ಮಂದಿರದಲ್ಲಿ ಸಾಯಿ ಬಾಬಾರ 183 ನೇ ಜಯಂತಿಯ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಎಂಬಂತೆ ದೇಶ ಕಾಯುವ ಯೋಧರ ಶ್ರೇಯಾಸ್ಸಿಗಾಗಿ ದಿನಾಂಕ 28/ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಶಿರ್ಡಿ ಸಾಯಿ ಧುನಿ ಆರಾಧನೆ ನಡೆಯಲಿದೆ.

ಏನೀದು ಧುನಿ ಆರಾಧನೆ..?
ಸಾಯಿ ಬಾಬಾ ಶಿರಡಿಯಲ್ಲಿ ತಮ್ಮ ಸ್ವಹಸ್ತದಿಂದ 1838 ನೇ ಇಸವಿಯಲ್ಲಿ ಈ ಪವಿತ್ರ ಧುನಿಯನ್ನು ಬೆಳಗಿರುತ್ತಾರೆ.ಅಂದಿನಿಂದ ಇಂದಿನವರೆದಗೆ ಅದು ನಿರಂತರವಾಗಿ ಈ ಪವಿತ್ರ ಧುನಿ ನಿರಂತರವಾಗಿ ಪ್ರಜ್ವಲಿಸುತ್ತಾ ಬಂದಿದೆ, ಧುನಿ ಎಂಬ ಪದ ಧುನ್ ಎಂಬ ಧಾತುವಿನಿಂದ ಬಂದಿದ್ದು ಇದರ ಅರ್ಥ ಹಚ್ಚುವುದು , ಬೆಳಗುವುದು ಎಂದು ಹೇಳಲಾಗುತ್ತದೆ. ಹಾಗಾಗಿ ಪ್ರತಿ ವರ್ಷ ವಿವಿಧ ಸಾಯಿ ಬಾಬಾ ಮಂದಿರಗಳಲ್ಲಿ ಸಾಯಿ ಧುನಿ ಆರಾಧನೆ ನಡೆಸಲಾಗುತ್ತೆ ಆದರೆ ಯೋಧರ ಶ್ರೇಯಾಸ್ಸಿಗಾಗಿ ಉಡುಪಿ ಜಿಲ್ಲೆಯಲ್ಲಿ ಇದು ಪ್ರಥಮ ಕಾರ್ಯಕ್ರಮವಾಗಿದೆ.

ಈ ಅಪೂರ್ವ ಕಾರ್ಯಕ್ರಮದಲ್ಲಿ ದೇಶ ಸೇವೆ ಸಲ್ಲಿಸಿ ನಿವೃತ್ತಿಯಾದ ಯೋಧರು ಭಾಗವಹಿಸಲಿದ್ದಾರೆ ,ಧುನಿ ಆರಾಧನೆಯಲ್ಲಿ ಭಾಗವಹಿಸುವ ಭಕ್ತರಿಗೆ ಧವಸಧಾನ್ಯ,ತುಪ್ಪ, ತೆಂಗು ಅರ್ಪಿಸಲು ಅವಕಾಶವಿದೆ ಎಂದು ಪ್ರಕಟನೆ ತಿಳಿಸಿದೆ.

ಜಾಹಿರಾತು

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago