ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 17641 ಮಂದಿಗೆ ಪ್ರಥಮ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಅವರು ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಗೆ 2021 ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಕೋವಿಡ್19 ಲಸಿಕೆ ಸರಬರಾಜು ಆಗುವ ನಿರೀಕ್ಷೆಯಿದ್ದು, ಈ ಲಸಿಕೆಯನ್ನು ಪ್ರಾಥಮಿಕವಾಗಿ ಕರೋನಾ ವಿರುದ್ದ ಹೋರಾಡುತ್ತಿರುವ ಫ್ರಂಟ್ಲೈನ್ ವರ್ಕರ್ ಗಳಾದ ಆರೋಗ್ಯ ಕ್ಷೇತ್ರದಲ್ಲಿನ ಸಿಬ್ಬಂದಿಗೆ ನೀಡಬೇಕಾಗಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 17641 ಮಂದಿಯ ಡಾಟಾ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಲಸಿಕೆ ನೀಡಲು ಗುರುತಿಸಲಾಗಿರುವ ಪ್ರತಿಯೊಬ್ಬರಿಗೂ 2 ಡೋಶ್ ಲಸಿಕೆ ನೀಡಲು ನಿರ್ಧರಿಸಲಗದಿದು, ಲಸಿಕೆ ನೀಡುವ ಕುರಿತಂತೆ ಈಗಾಗಲೇ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ, ಲಸಿಕೆ ಸಂಗ್ರಹ ಕೊಠಡಿ ಸಿದ್ದಪಡಿಸಲಾಗಿದ್ದು, ಲಸಿಕೆ ಸಾಗಾಟಕ್ಕೆ 1324 ವಾಹನಗಳನ್ನು ಗುರುತಿಸಿದ್ದು, 100 ಮಂದಿಗೆ ಒಂದು ಸ್ಥಳದಲ್ಲಿ ಲಸಿಕೆ ನೀಡಲು ನಿರ್ಧರಿಸಿದ್ದು, 342 ಸರ್ಕಾರಿ ಮತ್ತು 18 ಖಾಸಗಿ ಸ್ಥಳಗಳನ್ನು ಗುರುತಿಸಲಾಗಿದೆ, ಪ್ರತಿ ಲಸಿಕಾ ಕೇಂದ್ರದಲ್ಲಿ 5 ಮಂದಿ ಕರ್ತವ್ಯ ನಿರ್ವಹಿಸಲಿದ್ದು, ಲಸಿಕೆ ಪಡೆಯುಲು ಬರವವರಿಗೆ ನಿರೀಕ್ಷಣಾ ಕೊಟಡಿ, ಲಸಿಕೆ ನೀಡುವ ಕೊಠಡಿ ಮತ್ತು ಲಸಿಕೆ ನೀಡಿದ ನಂತರ ಅಬ್ರ್ವೇಷನ್ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿ ಜಗದೀಶ್ ವಿವರಿಸಿದರು.
ಈಗಾಗಲೇ ಗುರುತಿಸಲಾಗಿರುವ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ಲಸಿಕೆ ನೀಡುವ ಸ್ಥಳ, ಸಮಯದ ಕುರಿತು ಎಸ್.ಎಂ.ಎಸ್ ಮೂಲಕ ಸಂದೇಶ ಬರಲಿದ್ದು, ಇದರಲ್ಲಿ ಯಾವ ಲಸಿಕೆ ನೀಡಲಾಗುವುದು ಎಂಬ ಬಗ್ಗೆ ಸಂಪೂರ್ಣ ವಿವರ ಇರಲಿದ್ದು, ಎರಡು ಹಂತದ ಡೋಸ್ ಲಸಿಕೆ ನೀಡಿದ ಬಳಿಕ, ಅವರಿಗೆ ಲಸಿಕೆ ಪಡೆದ ಕುರಿತು ಪ್ರಮಾಣಪತ್ರ ಸಹ ವಿತರಿಸಲಾಗುವುದು ಎಂದು ಡಿಸಿ ಹೇಳಿದರು
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಡಿ.ಹೆಚ್.ಓ.ಡಾ.ಸುದೀರ್ ಚಂದ್ರ ಸೂಡಾ, ಆರೋಗ್ಯ ಇಲಖೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…