ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಪಾಸಿಟಿವ್ ಬಂದವರ ಸಂಖ್ಯೆ 107 ಕ್ಕೆ ಇಳಿದಿದ್ದು ಓರ್ವ ವೃದ್ಧ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ.
306 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಸದ್ಯ 2683 ಮಂದಿ ಸಕ್ರಿಯ ಸೋಂಕಿತರು ಜಿಲ್ಲೆಯಲ್ಲಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 363ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದ 107 ಮಂದಿಯಲ್ಲಿ ಉಡುಪಿ ತಾಲೂಕಿನ 50, ಕುಂದಾಪುರ ತಾಲೂಕಿನ 39 ಹಾಗೂ ಕಾರ್ಕಳ ತಾಲೂಕಿನ 17 ಮಂದಿ ಇದ್ದು, ಉಳಿದ ಒಬ್ಬರು ಹೊರಜಿಲ್ಲೆಗಳಿಂದ ಬಂದವರು. ಇವರಲ್ಲಿ 10 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 97 ಮಂದಿ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ನಿನ್ನೆ ಒಟ್ಟು 306 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 61461 ಕ್ಕೇರಿದೆ. ಸೋಮವಾರ ಜಿಲ್ಲೆಯಲ್ಲಿ 2096 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 64507 ಆಗಿದೆ ಎಂದು ಡಾ.ಉಡುಪ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…