ಉಡುಪಿ : ಜಿಲ್ಲೆಯಲ್ಲಿ ಪ್ರತಿದಿನ ಪತ್ತೆಯಾಗಿವ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಉಡುಪಿ, ಕುಂದಾಪುರ ಹಾಗೂ ಕಾರ್ಕಳದಲ್ಲಿ ಮೂರಂಕಿಯಲ್ಲಿ ಪತ್ತೆಯಾಗುತ್ತಿದ್ದ ಪ್ರಕರಣಗಳು ಇಂದು ಎರಡಂಕಿಗೆ ಇಳಿದಿದೆ.
ಜಿಲ್ಲೆಯಲ್ಲಿ ಇಂದು 204 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 95, ಕುಂದಾಪುರ 49, ಕಾರ್ಕಳ 51 ಹಾಗೂ ಹೊರ ಜಿಲ್ಲೆಯ 9 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3783 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಕುಂದಾಪುರದ 23 ವರ್ಷದ ಓರ್ವ ಯುವತಿ ಹಾಗೂ ಉಡುಪಿಯ 75 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.7 ರಂದು ಜಿಲ್ಲೆಯಲ್ಲಿ 504ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 58,752 ಮಂದಿ ಗುಣಮುಖರಾಗಿದ್ದಾರೆ.
ಜೂ.7 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 6,19,238 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 62,883 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 348 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 10 ಬ್ಲಾಕ್ ಫಂಗಸ್ ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಉಡುಪಿಯಲ್ಲಿ 3, ಕುಂದಾಪುರದಲ್ಲಿ 4 ಹಾಗೂ ಹೊರ ಜಿಲ್ಲೆಯ 11ಮಂದಿಯಲ್ಲಿ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6 ಮಂದಿ ಸೋಂಕಿನಿಂದ ಗುಣ ಮುಖರಾಗಿದ್ದು ಇಬ್ಬರು ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ. ಒಟ್ಟು 18 ಬ್ಲಾಕ್ ಫಂಗಸ್ ನ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…