Featured

ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡಲು ಪೂರಕ ವಾತಾವರಣ- ಪ್ರಿಯಾಂಕ ಮೇರಿ ಫ್ರಾನ್ಸಿಸ್ – Vishwanews24

ಉಡುಪಿ  : ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕರ್ತವ್ಯಕ್ಕಾಗಿ ನಿರ್ವಹಿಸಲು ಎಲ್ಲಾ ಸಿಬ್ಬಂದಿ, ಅಧಿಕಾರಿಗಳು ಪೂರಕ ವಾತಾವರಣ ನಿರ್ಮಿಸಿದ್ದು, ಇಲ್ಲಿ ತುಂಬ ಬುದ್ದಿವಂತ ಮತ್ತು ಉತ್ತಮ ಸಹಕಾರ ನೀಡುವ ಸಿಬ್ಬಂದಿ ಇದ್ದಾರೆ ಎಂದು ಬೆಂಗಳೂರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಭಡ್ತಿ ಹೊಂದಿ ಉಡುಪಿ ಜಿಲ್ಲೆಯಿಂದ ನಿರ್ಗಮಿಸುತ್ತಿರುವ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಗುರುವಾರ ರಜತಾದ್ರಿಯ ಅಟಲ್‍ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ.,ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳ ಸಂಕೀರ್ಣದಲ್ಲಿರುವ ವಿವಿಧ ಇಲಾಖೆಗಳು, ತಾಲೂಕು ಆಡಳಿತ, ತಾ.ಪಂ. ಮೊದಲಾದ ಕಚೇರಿಗಳ ವತಿಯಿಂದ ಏರ್ಪಡಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ 3 ವರ್ಷ 2 ತಿಂಗಳುಗಳ ಕಾಲ ಕರ್ತವ್ಯ ನಿರ್ವಹಿಸುವುದಕ್ಕೆ ಅವಕಾಶ ಸಿಕ್ಕಿದೆ. ಈ ಅವಧಿಯಲ್ಲಿ ತುಂಬ ಅನುಭವಗಳನ್ನು ಪಡೆದುಕೊಂಡಿದ್ದೇನೆ. ಇಲ್ಲಿ ಟೀಮ್ ವರ್ಕ್ ಮಾಡುವುದಕ್ಕೆ ಸಾಧ್ಯವಾಗಿದೆ. ಕಳೆದ ಮಳೆಗಾಲದಲ್ಲಿ ನೆರೆ ಬಂದಾಗ, ಚುನಾವಣಾ ಸಮಯದಲ್ಲಿ, ರಾಷ್ಟ್ರಪತಿ ಭೇಟಿ ಮೊದಲಾದ ಸಂದರ್ಭಗಳಲ್ಲಿ ಇದು ಅನುಭವಕ್ಕೆ ಬಂದಿದೆ. ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಯಾರಿಗೇ ಆಗಲಿ ಇಂಥ ಕೆಲಸವನ್ನು ವಹಿಸಿದರೆ ಅದನ್ನು ಪೂರ್ಣ ಪರಿಶ್ರಮದಿಂದ ಸಾಮರ್ಥ್ಯ ಮೀರಿ ಕೆಲಸ ಮಾಡುತ್ತಾರೆ, ಎಲ್ಲರು ಉತ್ತಮ ಸಹಕಾರ, ಬೆಂಬಲ ನೀಡಿದ್ದಾರೆ. ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಹೆಫ್ಸಿಬಾ ರಾಣಿ ಅವರಿಗೆ ಕೂಡ ಎಲ್ಲ ಅಧಿಕಾರಿ ಸಿಬ್ಬಂದಿ ಅವರು ಸಹಕಾರ, ಬೆಂಬಲ ನೀಡಿ ಎಂದು ಪ್ರಿಯಾಂಕ ಮೇರಿ ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago