Featured

ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡಲು ಪೂರಕ ವಾತಾವರಣ- ಪ್ರಿಯಾಂಕ ಮೇರಿ ಫ್ರಾನ್ಸಿಸ್ – Vishwanews24

ಉಡುಪಿ  : ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕರ್ತವ್ಯಕ್ಕಾಗಿ ನಿರ್ವಹಿಸಲು ಎಲ್ಲಾ ಸಿಬ್ಬಂದಿ, ಅಧಿಕಾರಿಗಳು ಪೂರಕ ವಾತಾವರಣ ನಿರ್ಮಿಸಿದ್ದು, ಇಲ್ಲಿ ತುಂಬ ಬುದ್ದಿವಂತ ಮತ್ತು ಉತ್ತಮ ಸಹಕಾರ ನೀಡುವ ಸಿಬ್ಬಂದಿ ಇದ್ದಾರೆ ಎಂದು ಬೆಂಗಳೂರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಭಡ್ತಿ ಹೊಂದಿ ಉಡುಪಿ ಜಿಲ್ಲೆಯಿಂದ ನಿರ್ಗಮಿಸುತ್ತಿರುವ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಗುರುವಾರ ರಜತಾದ್ರಿಯ ಅಟಲ್‍ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ.,ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳ ಸಂಕೀರ್ಣದಲ್ಲಿರುವ ವಿವಿಧ ಇಲಾಖೆಗಳು, ತಾಲೂಕು ಆಡಳಿತ, ತಾ.ಪಂ. ಮೊದಲಾದ ಕಚೇರಿಗಳ ವತಿಯಿಂದ ಏರ್ಪಡಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ 3 ವರ್ಷ 2 ತಿಂಗಳುಗಳ ಕಾಲ ಕರ್ತವ್ಯ ನಿರ್ವಹಿಸುವುದಕ್ಕೆ ಅವಕಾಶ ಸಿಕ್ಕಿದೆ. ಈ ಅವಧಿಯಲ್ಲಿ ತುಂಬ ಅನುಭವಗಳನ್ನು ಪಡೆದುಕೊಂಡಿದ್ದೇನೆ. ಇಲ್ಲಿ ಟೀಮ್ ವರ್ಕ್ ಮಾಡುವುದಕ್ಕೆ ಸಾಧ್ಯವಾಗಿದೆ. ಕಳೆದ ಮಳೆಗಾಲದಲ್ಲಿ ನೆರೆ ಬಂದಾಗ, ಚುನಾವಣಾ ಸಮಯದಲ್ಲಿ, ರಾಷ್ಟ್ರಪತಿ ಭೇಟಿ ಮೊದಲಾದ ಸಂದರ್ಭಗಳಲ್ಲಿ ಇದು ಅನುಭವಕ್ಕೆ ಬಂದಿದೆ. ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಯಾರಿಗೇ ಆಗಲಿ ಇಂಥ ಕೆಲಸವನ್ನು ವಹಿಸಿದರೆ ಅದನ್ನು ಪೂರ್ಣ ಪರಿಶ್ರಮದಿಂದ ಸಾಮರ್ಥ್ಯ ಮೀರಿ ಕೆಲಸ ಮಾಡುತ್ತಾರೆ, ಎಲ್ಲರು ಉತ್ತಮ ಸಹಕಾರ, ಬೆಂಬಲ ನೀಡಿದ್ದಾರೆ. ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಹೆಫ್ಸಿಬಾ ರಾಣಿ ಅವರಿಗೆ ಕೂಡ ಎಲ್ಲ ಅಧಿಕಾರಿ ಸಿಬ್ಬಂದಿ ಅವರು ಸಹಕಾರ, ಬೆಂಬಲ ನೀಡಿ ಎಂದು ಪ್ರಿಯಾಂಕ ಮೇರಿ ತಿಳಿಸಿದರು.

Vishwa News 24

Recent Posts

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

9 minutes ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

16 minutes ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

29 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

35 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

44 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 hours ago