ಉಡುಪಿ: ಉಡುಪಿ ಜಿಲ್ಲೆಯಲ್ಲಿ ಎರಡನೆಯ ಅಲೆ ಇನ್ನೂ ಮುಕ್ತಾಯ ಆಗಿಲ್ಲ,ಜನರಲ್ಲಿ ಕೊರೋನಾ ಹೋಗಿದೆ ಎಂಬ ಭಾವನೆ ಬೇಡ ಎಂದು ಹೇಳಿರುವ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ.ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಸ್ಕ್ ಇಲ್ಲದವರಿಗೆ ದಂಡ ವಿಧಿಸಲಾಗುವುದು.ಜವಾಬ್ದಾರಿ ಸ್ಥಾನದಲ್ಲಿರುವವರು ಮೊದಲು ಸೂಚನೆ ಅನುಸರಿಸಬೇಕು.ಜನಪ್ರತಿನಿಧಿಗಳು, ಅಧಿಕಾರಿಗಳು ಕೊರೋನಾ ಮಾರ್ಗಸೂಚಿಯನ್ನು ಪಾಲಿಸಿ ಜನಕ್ಕೆ ಮಾದರಿಯಾಗಬೇಕು ಎಂದು ಹೇಳಿದ್ದಾರೆ.
ಸಾರ್ವಜನಿಕರು, ಸಂಘ ಸಂಸ್ಥೆಗಳು ಕೊರೋನ ಮಾರ್ಗಸೂಚಿ ಪಾಲಿಸಬೇಕು.ಉಡುಪಿ ಜಿಲ್ಲೆಯಾದ್ಯಂತ 1ತಿಂಗಳಿನಿಂದ ಪ್ರತಿದಿನ 100 ಪಾಸಿಟಿವ್ ಕೇಸ್ ಬರುತ್ತಿದೆ.ಜಿಲ್ಲೆಯ ಪಾಸಿಟಿವಿಟಿ ರೇಟ್ 3 ಶೇಕಡಾ ಆಸುಪಾಸಿನಲ್ಲಿದೆ.ಎರಡು ಮೂರು ದಿನದಿಂದ ಶೇಕಡಾ 5 ಪಾಸಿಟಿವಿಟಿ ರೇಟ್ ಬರುತ್ತಿದೆ.ಕೇರಳ ಮತ್ತು ಮಹಾರಾಷ್ಟ್ರದ ಜೊತೆ ಉಡುಪಿ ಸಂಪರ್ಕದಲ್ಲಿರುವ ಜಿಲ್ಲೆ.ಪಾಸಿಟಿವ್ ಸಂಖ್ಯೆ ಹೆಚ್ಚಾಗಿದ್ದರೂ ಕಾರ್ಯಕ್ರಮಗಳು ನಡೆಯುತ್ತಿವೆ.ಬೇರೆಬೇರೆ ಕಾರ್ಯಕ್ರಮ ಮಾಡುವವರೇ ಮೂರನೇ ಅಲೆಯ ಆಹ್ವಾನಕ್ಕೆ ಕಾರಣ ಆಗುತ್ತಾರೆ.ಕಾರ್ಯಕ್ರಮ ಮಾಡುವವರಿಂದ ಸಾಮಾನ್ಯ ಜನರ ಜೀವನಕ್ಕೆ ಕಷ್ಟವಾಗಲಿದೆ.ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣದ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ ಎಂದು ಉಡುಪಿ ಡಿ.ಸಿ ಜಿ. ಜಗದೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…