ಉಡುಪಿ: ಉಡುಪಿ ಜಿಲ್ಲೆಯಲ್ಲಿ ಎರಡನೆಯ ಅಲೆ ಇನ್ನೂ ಮುಕ್ತಾಯ ಆಗಿಲ್ಲ,ಜನರಲ್ಲಿ ಕೊರೋನಾ ಹೋಗಿದೆ ಎಂಬ ಭಾವನೆ ಬೇಡ ಎಂದು ಹೇಳಿರುವ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ.ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಸ್ಕ್ ಇಲ್ಲದವರಿಗೆ ದಂಡ ವಿಧಿಸಲಾಗುವುದು.ಜವಾಬ್ದಾರಿ ಸ್ಥಾನದಲ್ಲಿರುವವರು ಮೊದಲು ಸೂಚನೆ ಅನುಸರಿಸಬೇಕು.ಜನಪ್ರತಿನಿಧಿಗಳು, ಅಧಿಕಾರಿಗಳು ಕೊರೋನಾ ಮಾರ್ಗಸೂಚಿಯನ್ನು ಪಾಲಿಸಿ ಜನಕ್ಕೆ ಮಾದರಿಯಾಗಬೇಕು ಎಂದು ಹೇಳಿದ್ದಾರೆ.
ಸಾರ್ವಜನಿಕರು, ಸಂಘ ಸಂಸ್ಥೆಗಳು ಕೊರೋನ ಮಾರ್ಗಸೂಚಿ ಪಾಲಿಸಬೇಕು.ಉಡುಪಿ ಜಿಲ್ಲೆಯಾದ್ಯಂತ 1ತಿಂಗಳಿನಿಂದ ಪ್ರತಿದಿನ 100 ಪಾಸಿಟಿವ್ ಕೇಸ್ ಬರುತ್ತಿದೆ.ಜಿಲ್ಲೆಯ ಪಾಸಿಟಿವಿಟಿ ರೇಟ್ 3 ಶೇಕಡಾ ಆಸುಪಾಸಿನಲ್ಲಿದೆ.ಎರಡು ಮೂರು ದಿನದಿಂದ ಶೇಕಡಾ 5 ಪಾಸಿಟಿವಿಟಿ ರೇಟ್ ಬರುತ್ತಿದೆ.ಕೇರಳ ಮತ್ತು ಮಹಾರಾಷ್ಟ್ರದ ಜೊತೆ ಉಡುಪಿ ಸಂಪರ್ಕದಲ್ಲಿರುವ ಜಿಲ್ಲೆ.ಪಾಸಿಟಿವ್ ಸಂಖ್ಯೆ ಹೆಚ್ಚಾಗಿದ್ದರೂ ಕಾರ್ಯಕ್ರಮಗಳು ನಡೆಯುತ್ತಿವೆ.ಬೇರೆಬೇರೆ ಕಾರ್ಯಕ್ರಮ ಮಾಡುವವರೇ ಮೂರನೇ ಅಲೆಯ ಆಹ್ವಾನಕ್ಕೆ ಕಾರಣ ಆಗುತ್ತಾರೆ.ಕಾರ್ಯಕ್ರಮ ಮಾಡುವವರಿಂದ ಸಾಮಾನ್ಯ ಜನರ ಜೀವನಕ್ಕೆ ಕಷ್ಟವಾಗಲಿದೆ.ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣದ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ ಎಂದು ಉಡುಪಿ ಡಿ.ಸಿ ಜಿ. ಜಗದೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…