ಉಡುಪಿ: ಕಾರ್ಕಳದ ಮುನಿಯಾಲು ಗ್ರಾಮದ 75 ವರ್ಷ ವಯಸ್ಸಿನ ಹಿರಿಯ ವೃದ್ದರೊಬ್ಬರು ಮತ್ತವರ ಪತ್ನಿ ಇತ್ತೀಚೆಗೆ ಹತ್ತುದಿನಗಳ ಕಾಲ ಇಸ್ರೇಲ್ ಪ್ರವಾಸ ಮಾಡಿ ಬಂದಿದ್ದರು. ಶೀತ ಭಾದೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ರಾತ್ರಿ ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡುವಿನಲ್ಲಿ ದಾಖಲು ಮಾಡಲಾಗಿದೆ. ಅಲ್ಲದೆ ವಯೋಸಹಜವಾಗಿ ರಕ್ತದೊತ್ತಡ, ಮಧುಮೇಹ, ಕಾಯಿಲೆಯಿಂದ ಕೂಡ ಬಳಲುತ್ತಿದ್ದರು. ಉಸಿರಾಟದ ತೊಂದರೆಯೂ ಕೂಡ ಕಂಡು ಬಂದಿದೆ. ಅವರನ್ನು ಇದೀಗ ಪ್ರತ್ಯೇಕ ವಾರ್ಡ್ನಲ್ಲಿ ಗಮನಿಸಲು ಇಡಲಾಗಿದೆ. ಆರೋಗ್ಯ ಚೆನ್ನಾಗಿದೆ ಯಾವುದೇ ಏರುಪೇರು ಕಂಡು ಬಂದಿಲ್ಲ. ಅಲ್ಲದೆ ಅವರ ಪತ್ನಿಗೂ ಯಾವುದೆ ತೊಂದರೆ ಕಾಣಿಸಿಕೊಂಡಿಲ್ಲ.
ಆ ವೃದ್ದ ದಂಪತಿಗಳು ಹತ್ತು ದಿನಗಳ ಕಾಲ ಇಸ್ರೇಲ್ ಪ್ರವಾಸ ಮಾಡಿ ಬಂದಿದ್ದರು. ಆದರೆ ಮೇಲ್ನೋಟಕ್ಕೆ ಯಾವುದೇ ಸೋಕು ತಗುಲಿರುವಂತೆ ಕಾಣುತ್ತಿಲ್ಲ. ಇಂದು ಬೆಳಗ್ಗೆಯಷ್ಟೇ ಅವರ ರಕ್ತದ ಸ್ಯಾಂಪಲ್ ಮತ್ತು ರಕ್ತಸ್ರಾವದ ಮಾದರಿಯನ್ನು ಬೆಂಗಳೂರಿನ ಲ್ಯಾಬ್ಗೆ ಕಳುಹಿಸಲಾಗಿದ್ದು ನಾಳೆ ಅದರ ವರದಿ ಬರಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಇದೇ ವಿಚಾರವಾಗಿ ಕಾರ್ಕಳದ ಇಬ್ಬರಿಗೆ ಕೊರೋನಾ ಸೋಂಕು ಎಂಬ ಸುಳ್ಳು ಮಾಹಿತಿ ವೈರಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಅಥವಾ ಭಯ ಹುಟ್ಟಿಸುವ ಸಂದೇಶಗಳನ್ನು ರವಾನೆ ಮಾಡಿದ್ದಲ್ಲಿ ಅವರ ಮೇಲೆ ಕಠಿಣ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸುಧೀರ್ ಚಂಧ್ರ ಸೂಡ ಅವರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…