Featured

ಉಡುಪಿ : ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಳಿಕೆ :  ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಳಿಕೆ :  ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯ ತಾಯಿ ಮತ್ತು ಮರಣ ಪ್ರಮಾಣ ನಿಯಂತ್ರಣ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟç ಮತ್ತು ರಾಜ್ಯದಲ್ಲಿನ ಸರಾಸರಿಯನ್ನು ಹೋಲಿಸಿದಾಗ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆ ಇದೆ ಎಂದ ಅವರು ಜಿಲ್ಲೆಯು
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದರು.

ಜಿಲ್ಲೆಯಲ್ಲಿ ಶಿಶು ಮರಣವು 1000 ಕ್ಕೆ 2.9 ಇದೆ. ಇದು ರಾಜ್ಯದಲ್ಲಿ ಸರಾಸರಿ 25, ರಾಷ್ಟçದ ಸರಾಸರಿ 29 ಇದೆ. ಪಕ್ಕದ ಕೇರಳ ರಾಜ್ಯದಲ್ಲಿ 10 ಇದೆ. ತಾಯಿ ಮರಣದ ಸಂಖ್ಯೆಯು ಜಿಲ್ಲೆಯಲ್ಲಿ 1 ಲಕ್ಷಕ್ಕೆ 85 ಇದ್ದರೆ, ಅದು ರಾಜ್ಯದಲ್ಲಿ ಸರಾಸರಿ 108, ದೇಶದಲ್ಲಿ 134 ಇದೆ. ನೆರೆ ರಾಜ್ಯ ಕೇರಳದಲ್ಲಿ 100 ಇದೆ ಎಂದರು.

ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಹೆರಿಗೆ ಮೊದಲು ಹಾಗೂ ನಂತರದ ದಿನಗಳಲ್ಲಿ ಉತ್ತಮ ಆರೋಗ್ಯ ಸೇವೆ ನೀಡಬೇಕು. ಆಗ ಮಾತ್ರ ತಾಯಿ ಮತ್ತು ಶಿಶು ಮರಣದ ಸಂಖ್ಯೆ  ಕಡಿಮೆಯಾಗುತ್ತದೆ ಎಂದ ಅವರು ಗರ್ಭಿಣಿಯರಿಗೆ ತಪ್ಪದೇ ತಾಯಿ ಕಾರ್ಡ್ಗಳನ್ನು ಪ್ರತಿಯೊಬ್ಬರಿಗೂ ವಿತರಿಸುವುದರೊಂದಿಗೆ ಅವರುಗಳಿಗೆ ಉತ್ತಮ ಆರೋಗ್ಯದಿಂದಿರಲು ಸೂಕ್ತ ಸಲಹೆಗಳನ್ನು ನೀಡುವುದರ ಜೊತೆಗೆ ಪೌಷ್ಟಿಕ ಆಹಾರಗಳನ್ನು ಒದಗಿಸಬೇಕು ಎಂದರು.

ಸಾಮಾನ್ಯವಾಗಿ ರಕ್ತ ಹೀನತೆ, ರಕ್ತಸ್ರಾವ, ತಾಯಿ ಮರಣ ಪ್ರಮಾಣಕ್ಕೆ ಪ್ರಮುಖ ಅಂಶವಾಗಿದೆ. ಇದರ ಬಗ್ಗೆ ಆರೋಗ್ಯ ಇಲಾಖೆಯವರು ಹೆಚ್ಚು ಒತ್ತು ನೀಡಬೇಕು ಎಂದ ಅವರು ಗರ್ಭೀಣಿ ಮಹಿಳೆಯರು ತಿಂಗಳ  ಚಿಕಿತ್ಸೆಗೆ ಬಂದಾಗ  ಅವರಿಗೆ  ಇತರ ಯಾವುದೇ ಕಾಯಿಲೆಗಳು ಇವೆ ಎಂಬುದರ ಬಗ್ಗೆ ಪರೀಕ್ಷೆ ಮಾಡುವುದರೊಂದಿಗೆ ಅವುಗಳನ್ನು ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 10 ಜನ ತಾಯಂದಿರು ಮರಣ ಹೊಂದಿದ್ದಾರೆ ಹಾಗೂ 30 ಶಿಶುಗಳ ಮರಣ ಸಂಭವಿಸಿರುತ್ತದೆ ಎಂದ ಅವರು 6 ಪ್ರಕರಣಗಳಲ್ಲಿ ಮರಣ ಸಂಭವಿಸುವ0ತಹ ಸಾಧ್ಯತೆ ಇರುವ ಗರ್ಭಿಣಿ ಮಹಿಳೆಯರಿಗೆ ಸೂಕ್ತ  ಚಿಕಿತ್ಸೆ ನೀಡಿ ಅವರ ಪ್ರಾಣ ಉಳಿಸಲಾಗಿದೆ ಎಂದರು.

ತಾಯಿ ಶಿಶು ಮರಣ ಸಂಭವಿಸಿದಾಗ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದ ಅವರು ಹೊರ ಜಿಲ್ಲೆಯಿಂದ ಈ ಜಿಲ್ಲೆಗೆ ವೈದ್ಯಕೀಯ ಚಿಕಿತ್ಸೆಗೆ ಆಗಮಿಸಿ, ಮರಣ ಹೊಂದಿದಾಗ ಆ ಜಿಲ್ಲೆಯ ಜಿಲ್ಲಾ ಮಟ್ಟದ ಸಮಿತಿಯು ಈ ಬಗ್ಗೆ ಪರಿಶೀಲಿಸಲು ಪತ್ರವನ್ನು ಬರೆಯಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ. ಮಧುಸೂದನ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ. ರಾಮ ಹಾಗೂ ಮತ್ತಿತರ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

7 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

7 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

7 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

8 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

10 hours ago