Featured

ಉಡುಪಿ : ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ ಸಹಕರಿಸುವಂತೆ ಎಸ್ಪಿಗೆ ಯಶ್ ಪಾಲ್ ಮನವಿ – vishwanews24

ಉಡುಪಿ : ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ ಸಹಕರಿಸುವಂತೆ ಎಸ್ಪಿ ಹಾಗೂ ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿಯಾಗಿ ಮನವಿ ಮಾಡಿದರು.

ದೈವಾರಾಧನೆಯ ಚೌಕಟ್ಟಿನಲ್ಲಿ ದೈವಗಳಿಗೆ ರಕ್ತಹಾರದ ಕಲ್ಪನೆಯಲ್ಲಿ ಹಲವು ದೈವಸ್ಥಾನ, ಮಂದಿರಗಳಲ್ಲಿ ಹಲವಾರು ದಶಕಗಳಿಂದ ಕೋಳಿಪಡೆ ಆಯೋಜಿಸುವ ಪದ್ಧತಿ ಇದೆ, ಹಾಗೂ ಜಿಲ್ಲೆಯಾದ್ಯಂತ ಯಕ್ಷಗಾನ, ನೇಮೋತ್ಸವ ಕಾರ್ಯಕ್ರಮಗಳು ಈ ಹಿಂದಿನಿಂದಲೂ ನಿರಂತರವಾಗಿ ನಡೆಯುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ತುಳುನಾಡಿನ ಸಾಂಸ್ಕೃತಿಕ ಹಿನ್ನೆಲೆ, ಧಾರ್ಮಿಕ ನಂಬಿಕೆಗಳಿಗೆ ಪೂರಕವಾಗಿ ಅವಕಾಶ ನೀಡಿ ಸಹಕರಿಸಬೇಕು.

ತುಳುನಾಡಿನಲ್ಲಿ ಧಾರ್ಮಿಕ ಆಚರಣೆಗಳನ್ನು ಶ್ರದ್ದಾ ಭಕ್ತಿಯಿಂದ ನಡೆಸಿಕೊಂಡು ಬರುವ ಭಕ್ತರಿಗೆ ಭಾವನಾತ್ಮಕ ವಿಷಯವಾಗಿದ್ದು ಈ ಹಿಂದಿನಂತೆ ಆಚರಣೆಗೆ ಅವಕಾಶ ನೀಡಬೇಕು ಈ ಬಗ್ಗೆ ಸಾರ್ವಜನಿಕರ ಪರವಾಗಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೂ ಮನವಿ ಮಾಡುವುದಾಗಿ ತಿಳಿಸಿದರು.
ಮುಂದಿನ ದಿನಗಳಲ್ಲಿ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡದಿದ್ದಲ್ಲಿ ಜಿಲ್ಲೆಯ ಸಮಸ್ತ ಭಕ್ತರು, ದೇವಸ್ಥಾನದ ಪ್ರಮುಖರು, ಸಾರ್ವಜನಿಕರು ಪಕ್ಷಾತೀತವಾಗಿ ತುಳುನಾಡಿನ ಆಚರಣೆಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೋರಾಟ ನಡೆಸುವ ಸನ್ನಿವೇಶ ನಿರ್ಮಾಣವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಹರಿಮಕ್ಕಿ ರತ್ನಾಕರ ಶೆಟ್ಟಿ, ಶ್ರೀ ಸುರೇಶ್ ನಾಯಕ್ ಕುಯಿಲಾಡಿ, ಶ್ರೀ ದಿನಕರ ಬಾಬು, ಕಿರಣ್ ಕುಮಾರ್ ಬೈಲೂರು, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಶ್ರೀ ದಿನೇಶ್ ಅಮೀನ್, ಶ್ರೀ ರಾಜೀವ್‌ ಕುಲಾಲ್, ಶ್ರೀ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago