Featured

ಉಡುಪಿ : ಜಿಲ್ಲೆಯಲ್ಲಿ ದಸರಾ ಆಚರಣೆಗೆ ಮಾರ್ಗಸೂಚಿ ಬಿಡುಗಡೆ  – Vishwanews24

ಉಡುಪಿ: ಜಿಲ್ಲೆಯಲ್ಲಿ ದಸರಾ ಆಚರಣೆಗೆ ಮಾರ್ಗಸೂಚಿ ಬಿಡುಗಡೆ  – Vishwanews24

ಉಡುಪಿ: ಜಿಲ್ಲೆಯಲ್ಲಿ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಕೂರ್ಮ ರಾವ್‌ ಎಂ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

1. ದಿನಾಂಕ: 07-10-2021 ರಿಂದ ದಿನಾಂಕ: 15.10.2021 ರವರೆಗೆ ನಡೆಯುವ ದಸರಾ ಆಚರಣೆಯ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

2. ದಸರಾ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಎಲ್ಲಾ ಕಾರ್ಯಕ್ರಮಗಳನ್ನುನಿಷೇಧಿಸಲಾಗಿದೆ.

3. ದೇವಾಲಯದಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ ಅರ್ಚಕರು/ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ವರ್ಗದವರು ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

4. ಕಾರ್ಯಕ್ರಮದ ಆಯೋಜಕರು /ದೇವಸ್ಥಾನದ ಆಡಳಿತಾಧಿಕಾರಿಯವರು ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್, ಮಾಸ್ಕ್ ಬಳಕೆ , ಸಾಮಾಜಿಕ ಅಂತರ ಪಾಲನೆಗೆ ಕ್ರಮಕೈಗೊಳ್ಳತಕ್ಕದ್ದು .

5. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯಇಲಾಖೆ,ಪೊಲೀಸ್ ಇಲಾಖೆ,ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

ಆದುದರಿಂದ ಸರಕಾರದ ಆದೇಶದಂತೆ ದಸರಾ ಆಚರಣೆಯನ್ನು ಕೋವಿಡ್ ಪಾಸಿಟಿವಿಟಿ ದರದ ಏರಿಕೆಗೆ ಕಾರಣವಾಗದಂತೆ ಅತ್ಯಂತ ಸರಳವಾಗಿ ಮತ್ತು ಭಕ್ತಿಪೂರ್ವಕವಾಗಿ ಕೋವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಿಕೊಂಡು ಆಚರಿಸುವಂತೆ ಸಂಬಂಧಪಟ್ಟ ಎಲ್ಲಾ ಆಯೋಜಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಕೋರಿದ್ದಾರೆ.

ಉಡುಪಿ : ಪ್ರಿಯಾಂಕರನ್ನು ಬಂಧ ಮುಕ್ತ ಗೊಳಿಸದಿದ್ದರೆ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಉಗ್ರ ಹೋರಾಟ – Vishwanews24

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago