ಉಡುಪಿ : ನಕ್ಸಲರು ಕಾಣಿಸಿಕೊಂಡಿರುವ ಶಂಕೆ ಇದೆ ಎಂದು ಕೆಲವು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ, ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಮಾಹಿತಿಯು ನಿಜವಾಗಿದ್ದರೆ ತಿಳಿಸುತ್ತೇವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಹೇಳಿದ್ದಾರೆ.
ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಕಟ್ಟೆಚ್ಚರ ವಹಿಸಿದೆ ಎಂದು ಅವರು ತಿಳಿಸಿದರು.
ಕರ್ನಾಟಕದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮಾವೋವಾದಿಗಳ ಚಲನವಲನ ಕಂಡುಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.ವಿಕ್ರಮ್ ಗೌಡ ನೇತೃತ್ವದ ಮಾವೋವಾದಿಗಳ ತಂಡ ಕೇರಳದಿಂದ ಉಡುಪಿ ಜಿಲ್ಲೆಯ ಬೈಂದೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಿಗೆ ಬಂದಿದ್ದಾರೆ.
ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಕಲ್ ಗ್ರಾಮಗಳ ಮನೆಗಳಿಗೆ ಮಾವೋವಾದಿ ತಂಡ ಭೇಟಿ ನೀಡಿ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಲಭಿಸಿದೆ. ಈ ಮಾಹಿತಿ ಮೇರೆಗೆ ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…