ಉಡುಪಿ: ಪಹಣಿಗೆ ಆಧಾರ್ ಜೋಡಣೆ ಕಾರ್ಯ ಜಿಲ್ಲೆಯಲ್ಲಿ ಪ್ರಗತಿಯಲ್ಲಿದೆ. ಇದರಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಖಾತಾದಾರರು ಮರಣ ಹೊಂದಿರುವ ಬಗ್ಗೆ ತಂತ್ರಾಂಶದಲ್ಲಿ ನಮೂದಿಸಿದ್ದು ಇಂತಹ ಪ್ರಕರಣಗಳಲ್ಲಿ ಪೌತಿ/ವಾರೀಸು ಖಾತೆ ಆಂದೋಲನವನ್ನು ಆಯಾಯ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಸಲಾಗುತ್ತಿದೆ. ಅವುಗಳ ವಿವರ ಹೀಗಿದೆ.
ಉಡುಪಿ ತಾಲೂಕಿನಲ್ಲಿ ಪೌತಿ ಆಂದೋಲನ ನವೆಂಬರ್ 7, ಕುಂದಾಪುರ ತಾಲೂಕಿನಲ್ಲಿ ಪೌತಿ ಆಂದೋಲನ ನ. 8, ಕಾರ್ಕಳ ತಾಲೂಕಿನಲ್ಲಿ ಪೌತಿ ಆಂದೋಲನ ನ. 11, ಬ್ರಹ್ಮಾವರ ತಾಲೂಕಿನಲ್ಲಿ ಪೌತಿ ಆಂದೋಲನ ನ.12, ಬೈಂದೂರು ತಾಲೂಕಿನಲ್ಲಿ ಪೌತಿ ಆಂದೋಲನ ನ. 13, ಕಾಪು ತಾಲೂಕಿನಲ್ಲಿ ಪೌತಿ ಆಂದೋಲನ ನ.14 ಹಾಗೂ ಹೆಬ್ರಿ ತಾಲೂಕಿನಲ್ಲಿ ಪೌತಿ ಆಂದೋಲನ ನ. 15ರಂದು ನಡೆಯಲಿದೆ.
ಆದ್ದರಿಂದ ಜಿಲ್ಲೆಯಲ್ಲಿ ಪೌತಿ/ವಾರೀಸು ಖಾತೆ ಮಾಡಲು ಬಾಕಿ ಇರುವ ಜಮೀನಿನ ವಾರೀಸುದಾರರು ಆಯಾಯ ತಾಲೂಕು ಕಛೇರಿ ಅಥವಾ ತಮ್ಮ ಗ್ರಾಮದ ಗ್ರಾಮ ಆಡಳಿತ ಅಧಿಕಾರಿಗಳನ್ನು ತಕ್ಷಣವೇ ಸಂಪರ್ಕಿಸಿ ಮಾಹಿತಿಯನ್ನು ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಪೌತಿ ಆಂದೋಲನದಲ್ಲಿ ಭಾಗವಹಿಸುವಂತೆ ಹಾಗೂ ಈ ಪೌತಿ ಆಂದೋಲನದಡಿ ಜಮೀನಿನ ದಾಖಲೆಗಳನ್ನು ಪಹಣಿಯಲ್ಲಿ ಇಂಧೀಕರಿಸಲು ಕ್ರಮ ಕೈಗೊಳ್ಳಲಾಗುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…