Featured

ಉಡುಪಿ :  ಜಿಲ್ಲೆಯಲ್ಲಿ ಮಹಿಳಾ ಶಕ್ತಿಯ ಮೂಲಕ ಕೊಳಚೆ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಿದ್ದತೆ – Vishwanews24

ಉಡುಪಿ :  ಜಿಲ್ಲೆಯಲ್ಲಿ ಮಹಿಳಾ ಶಕ್ತಿಯ ಮೂಲಕ ಕೊಳಚೆ ಮುಕ್ತ ಗ್ರಾಮ ನಿರ್ಮಾಣಕ್ಕೆ ಸಿದ್ದತೆ – Vishwanews24

ಸ್ವಚ್ಛ ಭಾರತ್ ಮಿಷನ್ (ಗ್ರಾ) ಕಾರ್ಯಕ್ರಮದಡಿ ದ್ರವ ತ್ಯಾಜ್ಯ ನಿರ್ವಹಣೆ ಪ್ರಮುಖ ಘಟಕಾಂಶವಾಗಿದ್ದು, ಗ್ರಾಮಗಳಲ್ಲಿ ದಿನನಿತ್ಯ ಸ್ನಾನದ ಮನೆಯಿಂದ, ಪಾತ್ರೆ ತೊಳೆಯುವುದರಿಂದ , ಬಟ್ಟೆ ಒಗೆಯುವುದಿಂದ ಮನೆಗಳಲ್ಲಿ ಉತ್ಪತ್ತಿಯಾಗುವ, ಹಾಗೂ ಹೋಟೆಲ್, ಮದುವೆ ಹಾಲ್ ಇತ್ಯಾದಿ ವಾಣಿಜ್ಯ ಕೇಂದ್ರಗಳಿ0ದ ಉತ್ಪತ್ತಿಯಾಗುವ ಬೂದು ನೀರನ್ನು ಕಿಚನ್ ಗಾರ್ಡನ್ ಮೂಲಕ, ವೈಯಕ್ತಿಕ ಅಥವಾ ಸಮುದಾಯ ಹಂತದ ಸೋಕ್ ಪಿಟ್ ನಿರ್ಮಾಣ ಅಥವಾ ಇತರೇ ಸೂಕ್ತ ವಿಧಾನದ ಮೂಲಕ ವೈಜ್ಞಾನಿಕವಾಗಿ ಮಾಡಬೇಕಾಗುತ್ತದೆ. ಇದಕ್ಕಾಗಿ ಸಮರ್ಪಕ ದ್ರವ ತ್ಯಾಜ್ಯ ನಿರ್ವಹಣೆಗಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ವಿಸ್ತೃತಾ ಯೋಜನೆಯನ್ನು ಸಿದ್ದಪಡಿಸಿ, ಯೋಜನೆಯ ಅನುಷ್ಠಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.

ಅದರಂತೆ ಪ್ರಥಮ ಹಂತದಲ್ಲಿ ದ್ರವ ನಿರ್ವಹಣೆ ಕುರಿತಂತೆ , ಪ್ರತಿ ತಾಲೂಕಿನಲ್ಲಿ ಒಂದೂAದು ಗ್ರಾಮ ಪಂಚಾಯತ್ ಗಳನ್ನು ಗುರುತಿಸಿ, ಆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸಹಕಾರದೊಂದಿಗೆ, ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ಗ್ರಾಮಗಳನ್ನು ನಿರ್ಮಾಣ ಮಾಡಲು ಕೊಳಚೆ ಮುಕ್ತ ಗ್ರಾಮದೆಡೆ ಮಹಿಳಾ ಶಕ್ತಿ ನಡೆ – ದ್ರವ ತ್ಯಾಜ್ಯ ನಿರ್ವಹಣೆ ವಿಶೇಷ ಅಭಿಯಾನ ಎಂಬ ಜಾಗೃತಿ ಕಾರ್ಯಕ್ರಮವನ್ನು
ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ.

ಈ ಕಾರ್ಯಕ್ರಮದ ಮೂಲಕ ದ್ರವ ತ್ಯಾಜ್ಯ ನಿರ್ವಹಣೆ ಕುರಿತಂತೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಹಿತಿ
ನೀಡಿ ,ಮನೆ ಮನೆಯಲ್ಲಿ ಸೋಕ್ ಪಿಟ್ ನಿರ್ಮಿಸಿಕೊಳ್ಳುವಂತೆ ಪ್ರೇರೆಪಣೆ ನೀಡಲಾಗುತ್ತದೆ. ಹಾಗೂ ಸಮುದಾಯದಲ್ಲಿ ಇವರ ಮೂಲಕ ಅರಿವು ಮೂಡಿಸಲಾಗುತ್ತದೆ. ಉಡುಪಿಯ ತಾಲೂಕಿನ ಕೊಡಿಬೆಟ್ಟು, ಬ್ರಹ್ಮಾವರದ ಚೇರ್ಕಾಡಿ, ಕಾಪು ನ ಎಲ್ಲೂರು, ಕುಂದಾಪುರದ ಹಕ್ಲಾಡಿ, ಬೈಂದೂರು ನ ಗೋಳಿಹೊಳೆ, ಹೆಬ್ರಿ ಮಡಾಮಕ್ಕಿ ಹಾಗೂ ಕಾರ್ಕಳ ದ ಹಿರ್ಗಾನ ಗ್ರಾಮ ಪಂಚಾಯತ್ ಗಳಲ್ಲಿ ಈ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ.

ಸೋಕ್ ಪಿಟ್ ನಿರ್ಮಾಣ ಹೇಗೆ : ಮನೆಯೊಂದಕ್ಕೆ 1.44 ಚದುರ ಮೀ ನಲ್ಲಿ 0.6 ಮೀ ವ್ಯಾಸದ ಮತ್ತು 1.8 ಮೀ ಆಳದ ಇಂಗು ಗುಂಡಿ ನಿರ್ಮಿಸಬಹುದು.ಜಾಗ ಕಡಿಮೆ ಇದ್ದು , ಹಲವಾರು ಮನೆಗಳಿದ್ದರೆ ಸಾಮೂಹಿಕ ಇಂಗು ಗುಂಡಿ ನಿರ್ಮಿಸಬಹುದು. ಇದು ಒಣ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟಲು ಹೆಚ್ಚಲು ಅತ್ಯಂತ ಸಹಕಾರಿಯಾಗಲಿದೆ. ಈ ಗುಂಡಿಗಳ ನಿರ್ಮಾಣಕ್ಕೆ ಪರಿಣಿತರ ಹಾಗೂ ತಂತ್ರಜ್ಞರ ಅಗತ್ಯವಿಲ್ಲ. ಇದನ್ನು ನಿರ್ಮಿಸಲು ತಗಲುವ ವೆಚ್ಚ ಅತ್ಯಂತ ಕಡಿಮೆ ಇದ್ದು, ಉದ್ಯೋಗ ಖಾತರಿ ಯೋಜನೆಯಡಿ ಆರ್ಥಿಕ ನೆರವೂ ಸಹ ದೊರೆಯಲಿದೆ. ನಿರ್ವಹಣೆಯೂ ಸುಲಭವಾಗಿದ್ದು, 5-6 ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕಾಗುತ್ತದೆ. ಸೋಕ್ ಪಿಟ್ ನಿರ್ಮಾಣದಿಂದ ಬೂದು ನೀರನ್ನು ಸಮರ್ಪಕವಾಗಿ ಬಳಸಲು ಸಹಕಾರಿಯಾಗಲಿದ್ದು, ಬೂದು ನೀರು ಅಲ್ಲಲ್ಲಿ ನಿಲ್ಲುವುದು ತಪ್ಪುತ್ತದೆ, ಈ ನೀರನ್ನು ಕಿಚನ್ ಗಾರ್ಡನ್ ಗಳಿಗೆ ಬಳಸಬಹುದಾಗಿದ್ದು, ಇದರಿಂದ ವ್ಯರ್ಥವಾಗಿ
ನೀರಿ ಹರಿದು ಹೋಗುವುದು ತಪ್ಪುವುದರೊಂದಿಗೆ ಸುಂದರ ಪರಿಸರ ನಿರ್ಮಾಣವಾಗಲಿದೆ.

ಡಿಸೆಂಬರ್ 18 ರಂದು ಉಡುಪಿಯ ಕೊಡಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದ್ದು, ಇದರಲ್ಲಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಹಿತಿ ಕಾರ್ಯಕ್ರಮ, ದ್ರವ ತ್ಯಾಜ್ಯ ವಿಸ್ತೃತಾ ಯೋಜನಾ ವರದಿಯ ಮಂಡನೆ ಮತ್ತು ಚರ್ಚೆ, ವಿವಿಧ ಕಿರುಚಿತ್ರಗಳ ಪ್ರದರ್ಶನ, ದ್ರವ ತ್ಯಾಜ್ಯ ನಿರ್ವಹಣೆ ವಸ್ತುಪ್ರದರ್ಶನ, ಸೋಕ್ ಪಿಟ್ ನಿರ್ಮಾಣದ ಪ್ರಾತ್ಯಕ್ಷಿಕೆ, ವಾಣಿಜ್ಯ ಕೇಂದ್ರಗಳಿಗೆ ತೆರಳಿ ಅರಿವು ಮೂಡಿಸುವುದು
ಮುಂತಾದ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ದ್ರವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಸೋಕ್‌ಪಿಟ್ ಗಳ ನಿರ್ಮಾಣ ಸಹಕಾರಿಯಾಗಲಿದ್ದು, ಸಾರ್ವಜನಿಕರು ತಮ್ಮ ಮನೆಯಲ್ಲಿ ಸೋಕ್ ಪಿಟ್ ನಿರ್ಮಾಣ ಮಾಡಿಕೊಳ್ಳುವ ಮೂಲಕ ಕೈ ತೋಟ , ಪೌಷ್ಠಿಕ ತೋಟಗಳನ್ನು ನಿರ್ಮಿಸಿಕೊಳ್ಳಬಹುದಾಗಿದ್ದು, ಈ ವಿಧಾನ ಜಿಲ್ಲೆಗೆ ಹೆಚ್ಚು ಸೂಕ್ತವಾಗಲಿದೆ. ಇದರಿಂದ ವೈಜ್ಞಾನಿಕ ರೀತಿಯಲ್ಲಿ ಅಂತರ್ಜಲದ ವೃದ್ಧಿಯೂ ಆಗಲಿದೆ. ಈ ಬಗ್ಗೆ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರ ಮೂಲಕ ಜಿಲ್ಲೆಯಾದ್ಯಂತ ಅರಿವು ಮೂಡಿಸಲಾಗುತ್ತಿದೆ. : ಡಾ.ನವೀನ್ ಭಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್,ಉಡುಪಿ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago