Featured

ಉಡುಪಿ :  ಜಿಲ್ಲೆಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ :  ಜಿಲ್ಲೆಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿಯ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು.

ಮಂಗಳೂರು : ಯೋಜನಾ ವಿಭಾಗದ ಜಂಟಿ ನಿರ್ದೇಶಕರ ಮನೆ ಮೇಲೆ ಎಸಿಬಿ ದಾಳಿ -Vishwanews24

ಸೇನಾ ರ‍್ಯಾಲಿಯಲ್ಲಿ, 38500 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಅವರಿಗೆ ಶೌಚಗೃಹ, ಕುಡಿಯುವ ನೀರಿನ ಸೌಲಭ್ಯ ಒದಗಿಸಿ. ಸ್ವಚ್ಚತೆ, ಶ್ಯಾಮಿಯಾನ, ಬ್ಯಾರಿಕೇಡ್ ಅಳವಡಿಕೆ, ಲೈಟ್ ವ್ಯವಸ್ಥೆ, ತುರ್ತು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಮತ್ತು ಅಗ್ನಿಶಾಮಕ ವ್ಯವಸ್ಥೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಪೊಲೀಸ್ ನಿಯೋಜನೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳ ಒಗದಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಪರಿಶೀಲನೆ ನಡೆಸಲು ಸೂಕ್ತ ಸಿಬ್ಬಂದಿಯನ್ನು ನೇಮಿಸುವಂತೆ ಡಿಡಿಪಿಐ ಗೆ, ರ‍್ಯಾಲಿ ಸ್ಥಳದಲ್ಲಿ ಆಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಆಯ್ಕೆ ನಡೆಸಲು ಆಗಮಿಸುವ ಸೇನಾ ಸಿಬ್ಬಂದಿಗೆ ವಸತಿ ವ್ಯವಸ್ಥೆ ಹಾಗೂ ಸೂಕ್ತ ವಾಹನಗಳ ವ್ಯವಸ್ಥೆ ಒದಗಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ನಗರ ಸಭೆ ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಡಿಡಿಪಿಐ ಎನ್.ಹೆಚ್.ನಾಗೂರ, ಮಂಗಳೂರು ಸೇನಾ ನೇಮಕಾತಿಯ ನಿರ್ದೇಶಕ ಕರ್ನಲ್ ದುಬಾಶ್ ಮತ್ತು ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಮನ ಭಾರತದಲ್ಲಿ ಪೆಟ್ರೋಲ್ 93 , ರಾವಣನ ಲಂಕಾದಲ್ಲಿ 51 ರೂಪಾಯಿ : ಕೇಂದ್ರ ಸರ್ಕಾರದ ವಿರುದ್ದ ಸುಬ್ರಮಣಿಯನ್ ಸ್ವಾಮಿ -Vishwanews24

Vishwa News 24

Recent Posts

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

12 minutes ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

22 minutes ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

33 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

59 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

1 hour ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

1 hour ago