ಉಡುಪಿ : ಒಮಿಕ್ರಾನ್ ವೈರಾಣುವಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲು ಜನವರಿ 4 ರಂದು ಸರ್ಕಾರ ಆದೇಶ ಹೊರಡಿಸಿದ್ದು ಅದರಂತೆ ಜನವರಿ 5 ರ ಅಪರಾಹ್ನ 10.00 ರಿಂದ ಜನವರಿ 19 ರ ಪೂರ್ವಾಹ್ನ 5.00 ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಕಟ್ಟು ನಿಟ್ಟಾಗಿ ಜಾರಿಯಲ್ಲಿರುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಸ್ಪಷ್ಟಪಡಿಸಿದ್ದಾರೆ.
ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂ ವನ್ನು ರದ್ದುಪಡಿಸಿದ್ದಾರೆ ಎಂದು ದಿನಾಂಕ 10.09.2021 ರ ಸುದ್ದಿ ಹಾಗೂ ವಿಡಿಯೋ ತುಣುಕನ್ನು ಹರಿಯಬಿಟ್ಟಿರುವುದರಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ ಇದಕ್ಕೆ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ.
ಇದು ಒಂದು ಸುಳ್ಳು ವದಂತಿಯಾಗಿದ್ದು, ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ದಿನಾಂಕ: 05.01.2022 ರ ಅಪರಾಹ್ನ 10.00 ರಿಂದ ದಿನಾಂಕ: 19.01.2022 ರ ಪೂರ್ವಾಹ್ನ 5.00 ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಹಾಗೂ ವಾರಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸ್ಪಷ್ಟಪಡಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…