ಉಡುಪಿ : ಒಮಿಕ್ರಾನ್ ವೈರಾಣುವಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲು ಜನವರಿ 4 ರಂದು ಸರ್ಕಾರ ಆದೇಶ ಹೊರಡಿಸಿದ್ದು ಅದರಂತೆ ಜನವರಿ 5 ರ ಅಪರಾಹ್ನ 10.00 ರಿಂದ ಜನವರಿ 19 ರ ಪೂರ್ವಾಹ್ನ 5.00 ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಕಟ್ಟು ನಿಟ್ಟಾಗಿ ಜಾರಿಯಲ್ಲಿರುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಸ್ಪಷ್ಟಪಡಿಸಿದ್ದಾರೆ.
ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂ ವನ್ನು ರದ್ದುಪಡಿಸಿದ್ದಾರೆ ಎಂದು ದಿನಾಂಕ 10.09.2021 ರ ಸುದ್ದಿ ಹಾಗೂ ವಿಡಿಯೋ ತುಣುಕನ್ನು ಹರಿಯಬಿಟ್ಟಿರುವುದರಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ ಇದಕ್ಕೆ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ.
ಇದು ಒಂದು ಸುಳ್ಳು ವದಂತಿಯಾಗಿದ್ದು, ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ದಿನಾಂಕ: 05.01.2022 ರ ಅಪರಾಹ್ನ 10.00 ರಿಂದ ದಿನಾಂಕ: 19.01.2022 ರ ಪೂರ್ವಾಹ್ನ 5.00 ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಹಾಗೂ ವಾರಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸ್ಪಷ್ಟಪಡಿಸಿದ್ದಾರೆ.
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…