ಉಡುಪಿ : ಒಮಿಕ್ರಾನ್ ವೈರಾಣುವಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲು ಜನವರಿ 4 ರಂದು ಸರ್ಕಾರ ಆದೇಶ ಹೊರಡಿಸಿದ್ದು ಅದರಂತೆ ಜನವರಿ 5 ರ ಅಪರಾಹ್ನ 10.00 ರಿಂದ ಜನವರಿ 19 ರ ಪೂರ್ವಾಹ್ನ 5.00 ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಕಟ್ಟು ನಿಟ್ಟಾಗಿ ಜಾರಿಯಲ್ಲಿರುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಸ್ಪಷ್ಟಪಡಿಸಿದ್ದಾರೆ.
ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂ ವನ್ನು ರದ್ದುಪಡಿಸಿದ್ದಾರೆ ಎಂದು ದಿನಾಂಕ 10.09.2021 ರ ಸುದ್ದಿ ಹಾಗೂ ವಿಡಿಯೋ ತುಣುಕನ್ನು ಹರಿಯಬಿಟ್ಟಿರುವುದರಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ ಇದಕ್ಕೆ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ.
ಇದು ಒಂದು ಸುಳ್ಳು ವದಂತಿಯಾಗಿದ್ದು, ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ದಿನಾಂಕ: 05.01.2022 ರ ಅಪರಾಹ್ನ 10.00 ರಿಂದ ದಿನಾಂಕ: 19.01.2022 ರ ಪೂರ್ವಾಹ್ನ 5.00 ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಹಾಗೂ ವಾರಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸ್ಪಷ್ಟಪಡಿಸಿದ್ದಾರೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…