ಉಡುಪಿ: ಜಿಲ್ಲೆಯಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿದ ಬಳಿಕ ಮೊದಲ ಬಾರಿ ವಾರಾಂತ್ಯದ ಕರ್ಫ್ಯೂ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಗೊಳ್ಳಲಿದ್ದು, ಈ ವೇಳೆ ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರ ಹಾಗೂ ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಗೆ, 6 ರಿಂದ ಅಪರಾಹ 2 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಬೀದಿ ಬದಿ ವ್ಯಾಪಾರಿ ಗಳು ಸಹ ಬೆಳಗೆ, 6 ರಿಂದ ಅಪರಾಹ, 2 ರವರೆಗೆ ಕಾರ್ಯನಿರ್ವಹಿಸಬಹುದು. ಆದರೆ ಯಾವುದೇ ತಯಾರಿಸಿದ ಆಹಾರ, ಪಾನಿಪುರಿ, ಚಾಟ್ ಮಾರಲು ಅವಕಾಶವಿಲ್ಲ.
ಸಾರ್ವಜನಿಕ ವಿತರಣಾ ವ್ಯವಸ್ಥೆ ಸಹ ಇದೇ ಅವಧಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳು ಈ ಅವಧಿಯಲ್ಲಿ ಪಾರ್ಸೆಲ್ಗಳನ್ನು ಮಾತ್ರ ನೀಡಬೇಕು. ಹೋಮ್ ಡೆಲಿವರಿ ಸೇವೆಗಳು ದಿನ 24 ಗಂಟೆ ಕಾರ್ಯನಿರ್ವಹಿಸಬಹುದು. ರೆಸ್ಟೋರೆಂಟ್ಗಳು, ತಿನಿಸು ಕೇಂದ್ರಗಳಲ್ಲಿ ಆಹಾರವನ್ನು ಪಾರ್ಸೆಲ್ ಕೊಂಡೊಯ್ಯಬಹುದು.
ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣಿಕರಿಗೆ ನಿಲ್ದಾಣಗಳಿಗೆ ತೆರಳಲು ಅನುಮತಿ ಇದೆ. ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನ, ಖಾಸಗಿ ವಾಹನಗಳ, ಟ್ಯಾಕ್ಸಿಗಳ ಓಡಾಟಕ್ಕೆ ಅನುಮತಿ ಇದೆ. ಈಗಾಗಲೇ ನಿಗದಿಯಾಗಿರುವ ಮದುವೆಗೆ 40 ಮಂದಿಯ ಭಾಗವಹಿಸುವಿಕೆ ಯೊಂದಿಗೆ ಸರಳವಾಗಿ ಮನೆಯಲ್ಲಿ ನಡೆಸಲು ಅನುಮತಿ ಇದೆ. ಅದೇ ರೀತಿ ಶವಸಂಸ್ಕಾರವನ್ನೂ ಐದು ಮಂದಿಯ ಪಾಲ್ಗೊಳ್ಳುವಿಕೆಯೊಂದಿಗೆ ನಡೆಸಬಹುದು.
ಎಲ್ಲಾ ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಚೇರಿಗಳು, ಅವುಗಳ ಸ್ವಾಯತ್ತ ಸಂಸ್ಥೆಗಳು ಹಾಗೂ ಅದರಲ್ಲಿ ದುಡಿಯುವ ಅಧಿಕಾರಿಗಳು ಸಿಬ್ಬಂದಿಗಳ ಸಂಚಾರಕ್ಕೆ ಅನುಮತಿ ಇದೆ, ತುರ್ತು ಮತ್ತು ಅಗತ್ಯ ಸೇವೆಗಳ ಕೈಗಾರಿಕೆಗಳು, ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ಇದೆ. ರೋಗಿಗಳು, ಅವರ ಪರಿಚಾರಕರು, ಲಸಿಕೆ ತೆಗೆದುಕೊಳ್ಳುವವರು ಅಗತ್ಯ ದಾಖಲೆಗಳೊಂದಿಗೆ ಸಂಚರಿಸಲು ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…