Featured

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿ : ಜಿಲ್ಲಾಧಿಕಾರಿ -Vishwanews24

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿ : ಜಿಲ್ಲಾಧಿಕಾರಿ -Vishwanews24

ಉಡುಪಿ: ಜಿಲ್ಲೆಯಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿದ ಬಳಿಕ ಮೊದಲ ಬಾರಿ ವಾರಾಂತ್ಯದ ಕರ್ಫ್ಯೂ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಗೊಳ್ಳಲಿದ್ದು, ಈ ವೇಳೆ ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರ ಹಾಗೂ ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಗೆ, 6 ರಿಂದ ಅಪರಾಹ 2 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಬೀದಿ ಬದಿ ವ್ಯಾಪಾರಿ ಗಳು ಸಹ ಬೆಳಗೆ, 6 ರಿಂದ ಅಪರಾಹ, 2 ರವರೆಗೆ ಕಾರ್ಯನಿರ್ವಹಿಸಬಹುದು. ಆದರೆ ಯಾವುದೇ ತಯಾರಿಸಿದ ಆಹಾರ, ಪಾನಿಪುರಿ, ಚಾಟ್ ಮಾರಲು ಅವಕಾಶವಿಲ್ಲ.

ಸಾರ್ವಜನಿಕ ವಿತರಣಾ ವ್ಯವಸ್ಥೆ ಸಹ ಇದೇ ಅವಧಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳು ಈ ಅವಧಿಯಲ್ಲಿ ಪಾರ್ಸೆಲ್ಗಳನ್ನು ಮಾತ್ರ ನೀಡಬೇಕು. ಹೋಮ್ ಡೆಲಿವರಿ ಸೇವೆಗಳು ದಿನ 24 ಗಂಟೆ ಕಾರ್ಯನಿರ್ವಹಿಸಬಹುದು. ರೆಸ್ಟೋರೆಂಟ್ಗಳು, ತಿನಿಸು ಕೇಂದ್ರಗಳಲ್ಲಿ ಆಹಾರವನ್ನು ಪಾರ್ಸೆಲ್ ಕೊಂಡೊಯ್ಯಬಹುದು.

ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣಿಕರಿಗೆ ನಿಲ್ದಾಣಗಳಿಗೆ ತೆರಳಲು ಅನುಮತಿ ಇದೆ. ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನ, ಖಾಸಗಿ ವಾಹನಗಳ, ಟ್ಯಾಕ್ಸಿಗಳ ಓಡಾಟಕ್ಕೆ ಅನುಮತಿ ಇದೆ. ಈಗಾಗಲೇ ನಿಗದಿಯಾಗಿರುವ ಮದುವೆಗೆ 40 ಮಂದಿಯ ಭಾಗವಹಿಸುವಿಕೆ ಯೊಂದಿಗೆ ಸರಳವಾಗಿ ಮನೆಯಲ್ಲಿ ನಡೆಸಲು ಅನುಮತಿ ಇದೆ. ಅದೇ ರೀತಿ ಶವಸಂಸ್ಕಾರವನ್ನೂ ಐದು ಮಂದಿಯ ಪಾಲ್ಗೊಳ್ಳುವಿಕೆಯೊಂದಿಗೆ ನಡೆಸಬಹುದು.

ಎಲ್ಲಾ ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಚೇರಿಗಳು, ಅವುಗಳ ಸ್ವಾಯತ್ತ ಸಂಸ್ಥೆಗಳು ಹಾಗೂ ಅದರಲ್ಲಿ ದುಡಿಯುವ ಅಧಿಕಾರಿಗಳು ಸಿಬ್ಬಂದಿಗಳ ಸಂಚಾರಕ್ಕೆ ಅನುಮತಿ ಇದೆ, ತುರ್ತು ಮತ್ತು ಅಗತ್ಯ ಸೇವೆಗಳ ಕೈಗಾರಿಕೆಗಳು, ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ಇದೆ. ರೋಗಿಗಳು, ಅವರ ಪರಿಚಾರಕರು, ಲಸಿಕೆ ತೆಗೆದುಕೊಳ್ಳುವವರು ಅಗತ್ಯ ದಾಖಲೆಗಳೊಂದಿಗೆ ಸಂಚರಿಸಲು ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

9 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

10 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

10 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

11 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

11 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

12 hours ago