Featured

ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣ ಇದು ಆತಂಕದ ವಿಚಾರ : ಎಸ್ಪಿ ಕಳವಳ – vishwanews24

ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣ ಇದು ಆತಂಕದ ವಿಚಾರ : ಎಸ್ಪಿ‌ ಕಳವಳ

ಉಡುಪಿ: ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ‌ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ನಿಜಕ್ಕೂ ಆತಂಕದ ವಿಚಾರ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಳವಳ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಗುರುವಾರ ನಡೆದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೈಜ್ಞಾನಿಕ, ದೇವಾಲಯಗಳ ನಗರಿ ಎಂದೇ ಕರೆಯಲ್ಪಡುವ ಉಡುಪಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್ ಪ್ರಕರಣಗಳು ದಾಖಲಾಗುತ್ತಿದೆ. ಕಾಲೇಜಿಗೆ ಹೋಗುವ ಮಕ್ಕಳಲ್ಲೇ ಹೆಚ್ಚು ಕೇಸ್ ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಮಾರು ಸಮಸ್ಯೆಗಳು ನಮಗೆ ಕಂಡುಬಂದಿದೆ.

ಈ ಸಮಸ್ಯೆಯನ್ನು ಸರಿಪಡಿಸುವ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಮಾಡಿದ್ದೇವೆ. ಕಾಲೇಜು ಪ್ರಾಂಶುಪಾಲರು ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದಾರೆ ಎಂಬ ವಿಷಯ ಮಕ್ಕಳಿಗೆ ಗೊತ್ತಾದರೆ ಅವರಲ್ಲಿ ಒಂದು ರೀತಿಯ ಭಯ ಬರುತ್ತದೆ‌. ಡ್ರಗ್ಸ್ ವಿಚಾರಕ್ಕೆ ಅವರು ಹೆಚ್ಚಾಗಿ ಹೋಗಲ್ಲ‌ ಎಂದರು.

ಎಎಸ್ಪಿ ಸುಧಾಕರ್ ನಾಯ್ಕ್, ಡಿವೈಎಸ್ಪಿ ಡಿ.ಟಿ. ಪ್ರಭು, ಕಾರ್ಕಳ ವಿಭಾಗದ ಎಎಸ್ಪಿ ಡಾ. ಹರ್ಷ ಪ್ರಿಯಂವದಾ, ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗೀಸ್ ಇದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

6 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

9 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

10 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

10 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

10 hours ago