Featured

ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣ ಇದು ಆತಂಕದ ವಿಚಾರ : ಎಸ್ಪಿ ಕಳವಳ – vishwanews24

ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣ ಇದು ಆತಂಕದ ವಿಚಾರ : ಎಸ್ಪಿ‌ ಕಳವಳ

ಉಡುಪಿ: ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ‌ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ನಿಜಕ್ಕೂ ಆತಂಕದ ವಿಚಾರ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಳವಳ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಗುರುವಾರ ನಡೆದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೈಜ್ಞಾನಿಕ, ದೇವಾಲಯಗಳ ನಗರಿ ಎಂದೇ ಕರೆಯಲ್ಪಡುವ ಉಡುಪಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್ ಪ್ರಕರಣಗಳು ದಾಖಲಾಗುತ್ತಿದೆ. ಕಾಲೇಜಿಗೆ ಹೋಗುವ ಮಕ್ಕಳಲ್ಲೇ ಹೆಚ್ಚು ಕೇಸ್ ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಮಾರು ಸಮಸ್ಯೆಗಳು ನಮಗೆ ಕಂಡುಬಂದಿದೆ.

ಈ ಸಮಸ್ಯೆಯನ್ನು ಸರಿಪಡಿಸುವ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಮಾಡಿದ್ದೇವೆ. ಕಾಲೇಜು ಪ್ರಾಂಶುಪಾಲರು ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದಾರೆ ಎಂಬ ವಿಷಯ ಮಕ್ಕಳಿಗೆ ಗೊತ್ತಾದರೆ ಅವರಲ್ಲಿ ಒಂದು ರೀತಿಯ ಭಯ ಬರುತ್ತದೆ‌. ಡ್ರಗ್ಸ್ ವಿಚಾರಕ್ಕೆ ಅವರು ಹೆಚ್ಚಾಗಿ ಹೋಗಲ್ಲ‌ ಎಂದರು.

ಎಎಸ್ಪಿ ಸುಧಾಕರ್ ನಾಯ್ಕ್, ಡಿವೈಎಸ್ಪಿ ಡಿ.ಟಿ. ಪ್ರಭು, ಕಾರ್ಕಳ ವಿಭಾಗದ ಎಎಸ್ಪಿ ಡಾ. ಹರ್ಷ ಪ್ರಿಯಂವದಾ, ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗೀಸ್ ಇದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

13 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

13 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago