Featured

ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣ ಇದು ಆತಂಕದ ವಿಚಾರ : ಎಸ್ಪಿ ಕಳವಳ – vishwanews24

ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣ ಇದು ಆತಂಕದ ವಿಚಾರ : ಎಸ್ಪಿ‌ ಕಳವಳ

ಉಡುಪಿ: ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ‌ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ನಿಜಕ್ಕೂ ಆತಂಕದ ವಿಚಾರ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಳವಳ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಗುರುವಾರ ನಡೆದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೈಜ್ಞಾನಿಕ, ದೇವಾಲಯಗಳ ನಗರಿ ಎಂದೇ ಕರೆಯಲ್ಪಡುವ ಉಡುಪಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್ ಪ್ರಕರಣಗಳು ದಾಖಲಾಗುತ್ತಿದೆ. ಕಾಲೇಜಿಗೆ ಹೋಗುವ ಮಕ್ಕಳಲ್ಲೇ ಹೆಚ್ಚು ಕೇಸ್ ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಮಾರು ಸಮಸ್ಯೆಗಳು ನಮಗೆ ಕಂಡುಬಂದಿದೆ.

ಈ ಸಮಸ್ಯೆಯನ್ನು ಸರಿಪಡಿಸುವ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಮಾಡಿದ್ದೇವೆ. ಕಾಲೇಜು ಪ್ರಾಂಶುಪಾಲರು ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದಾರೆ ಎಂಬ ವಿಷಯ ಮಕ್ಕಳಿಗೆ ಗೊತ್ತಾದರೆ ಅವರಲ್ಲಿ ಒಂದು ರೀತಿಯ ಭಯ ಬರುತ್ತದೆ‌. ಡ್ರಗ್ಸ್ ವಿಚಾರಕ್ಕೆ ಅವರು ಹೆಚ್ಚಾಗಿ ಹೋಗಲ್ಲ‌ ಎಂದರು.

ಎಎಸ್ಪಿ ಸುಧಾಕರ್ ನಾಯ್ಕ್, ಡಿವೈಎಸ್ಪಿ ಡಿ.ಟಿ. ಪ್ರಭು, ಕಾರ್ಕಳ ವಿಭಾಗದ ಎಎಸ್ಪಿ ಡಾ. ಹರ್ಷ ಪ್ರಿಯಂವದಾ, ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗೀಸ್ ಇದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago