Featured

ಉಡುಪಿ : ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಿ :ಡಾ. ಎಂ.ಟಿ.ರೇಜು -Vishwanews24

ಉಡುಪಿ : ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಿ :ಡಾ. ಎಂ.ಟಿ.ರೇಜು -Vishwanews24

ಉಡುಪಿ  (Vishwanews24):ಜಿಲ್ಲೆಯಲ್ಲಿಕೊರೋನಾಎರಡನೇಅಲೆಯನ್ನು ನಿಯಂತ್ರಿಸಲು ಸರ್ಕಾರದ ಸೂಚನೆಯಂತೆ ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟಿಂಗ್‌ಗಳನ್ನು ನಡೆಸಿ, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನುಕೂಡಲೇ ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಪಾಸಿಟಿವಿಟಿ ಪ್ರಮಾಣವನ್ನುಕಡಿಮೆ ಮಾಡುವಂತೆಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿರೇಜು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿಕೋವಿಡ್ ನಿಯಂತ್ರಣಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿಕೋವಿಡ್‌ಎರಡನೇಅಲೆಯಲ್ಲಿಯುವಜನತೆ ಮತ್ತು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಪಾಸಿಟಿವ್  ಪ್ರಕರಣಗಳು ಕಂಡು ಬರುತ್ತಿದ್ದು, ಇವರಿಂದಕುಟುಂಬದ ಹಿರಿಯ ನಾಗರೀಕರೂ ಸೇರಿದಂತೆ ಪ್ರತಿಯೊಬ್ಬರರಿಗೂ ಸೋಂಕು ಹರಡುವ ಸಾಧ್ಯತೆಗಳಿದ್ದು, ಸರ್ಕಾರ ನಿಗದಿಪಡಿಸಿದಂತೆ ಪ್ರತಿದಿನ 4000 ಟೆಸ್ಟಿಂಗ್‌ಗಳನ್ನು ನಡೆಸಿ, ಶೀಘ್ರದಲ್ಲಿ ಸೋಂಕಿತರನ್ನು ಪತ್ತೆಹಚ್ಚಿ, ಸೋಂಕು ಹರಡುವುದನ್ನುತಪ್ಪಿಸಲುಕ್ರಮ ಕೈಗೊಳ್ಳಿ ಎಂದುಡಾ. ರೇಜು ತಿಳಿಸಿದರು.

ಕಾಪು : ನಿವೃತ್ತ ಸಿ.ಆರ್.ಪಿ.ಎಫ್ ಯೋಧನ ಪತ್ನಿ ವನಜಾಕ್ಷಿ ಅವರಿಗೆ ಸಮ್ಮಾನ, ಗೌರವ ಅರ್ಪಣೆ -Vishwanews24

ಪ್ರಸ್ತುತ ಪಾಸಿಟಿವ್ ಪ್ರಕರಣಕಂಡುಬರುತ್ತಿರುವ ಹೆಚ್ಚಿನ ಪ್ರಕರಣಗಳಲ್ಲಿರೋಗ ಲಕ್ಷಣಗಳು ಇಲ್ಲವಾಗಿದ್ದು, ಇಂತಹವರನ್ನು ಹೋಂ ಐಸೋಲೇಷನ್‌ಗೆ ಒಳಪಡಿಸಿ, ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆಯಾಗದಂತೆ ಹಾಗೂ ಲಸಿಕೆಯ ಕೊರತೆಯಾಗದಂತೆ ಎಚ್ಚರವಹಿಸಿ, 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು 45 ವರ್ಷ ಮೇಲ್ಪಟ್ಟವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡಿ, ಪ್ರಾಥಮಿಕಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲೂ ಸಹ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ಹೇಳಿದರು.

ಜಿಲ್ಲೆಯಾದ್ಯಂತಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆಯಾಗುತ್ತಿರುವಕುರಿತು ಪರಿಶೀಲಿಸಿ, ಸರ್ಕಾರದ ಸೂಚನೆಯಂತೆ ಮಾಸ್ಕ್ಧರಿಸದಿರುವ ಮತ್ತು ಸಾಮಾಜಿಕಅಂತರ ಪಾಲನೆ ಮಾಡದವರ ವಿರುದ್ಧದಂಡ ವಿಧಿಸುವುದರಜೊತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದರು. ಸಭೆಯಲ್ಲಿಜಿಲ್ಲಾಧಿಕಾರಿಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್‌ಭಟ್, ಎಎಸ್ಪಿ ಕುಮಾರಚಂದ್ರ, ಡಿಹೆಚ್‌ಓಡಾ.ಸುದೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್‌ಡಾ.ಮಧುಸೂದನ್‌ನಾಯಕ್, ಕೋವಿಡ್ ವಿಶೇಷಾಧಿಕಾರಿಡಾ.ಪ್ರೇಮಾನಂದ ಹಾಗೂ ಆರೋಗ್ಯಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago