ಉಡುಪಿ (Vishwanews24):ಜಿಲ್ಲೆಯಲ್ಲಿಕೊರೋನಾಎರಡನೇಅಲೆಯನ್ನು ನಿಯಂತ್ರಿಸಲು ಸರ್ಕಾರದ ಸೂಚನೆಯಂತೆ ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟಿಂಗ್ಗಳನ್ನು ನಡೆಸಿ, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನುಕೂಡಲೇ ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಪಾಸಿಟಿವಿಟಿ ಪ್ರಮಾಣವನ್ನುಕಡಿಮೆ ಮಾಡುವಂತೆಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿರೇಜು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿಕೋವಿಡ್ ನಿಯಂತ್ರಣಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿಕೋವಿಡ್ಎರಡನೇಅಲೆಯಲ್ಲಿಯುವಜನತೆ ಮತ್ತು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಇವರಿಂದಕುಟುಂಬದ ಹಿರಿಯ ನಾಗರೀಕರೂ ಸೇರಿದಂತೆ ಪ್ರತಿಯೊಬ್ಬರರಿಗೂ ಸೋಂಕು ಹರಡುವ ಸಾಧ್ಯತೆಗಳಿದ್ದು, ಸರ್ಕಾರ ನಿಗದಿಪಡಿಸಿದಂತೆ ಪ್ರತಿದಿನ 4000 ಟೆಸ್ಟಿಂಗ್ಗಳನ್ನು ನಡೆಸಿ, ಶೀಘ್ರದಲ್ಲಿ ಸೋಂಕಿತರನ್ನು ಪತ್ತೆಹಚ್ಚಿ, ಸೋಂಕು ಹರಡುವುದನ್ನುತಪ್ಪಿಸಲುಕ್ರಮ ಕೈಗೊಳ್ಳಿ ಎಂದುಡಾ. ರೇಜು ತಿಳಿಸಿದರು.
ಕಾಪು : ನಿವೃತ್ತ ಸಿ.ಆರ್.ಪಿ.ಎಫ್ ಯೋಧನ ಪತ್ನಿ ವನಜಾಕ್ಷಿ ಅವರಿಗೆ ಸಮ್ಮಾನ, ಗೌರವ ಅರ್ಪಣೆ -Vishwanews24
ಪ್ರಸ್ತುತ ಪಾಸಿಟಿವ್ ಪ್ರಕರಣಕಂಡುಬರುತ್ತಿರುವ ಹೆಚ್ಚಿನ ಪ್ರಕರಣಗಳಲ್ಲಿರೋಗ ಲಕ್ಷಣಗಳು ಇಲ್ಲವಾಗಿದ್ದು, ಇಂತಹವರನ್ನು ಹೋಂ ಐಸೋಲೇಷನ್ಗೆ ಒಳಪಡಿಸಿ, ಆಸ್ಪತ್ರೆಗಳಲ್ಲಿ ಬೆಡ್ಗಳ ಕೊರತೆಯಾಗದಂತೆ ಹಾಗೂ ಲಸಿಕೆಯ ಕೊರತೆಯಾಗದಂತೆ ಎಚ್ಚರವಹಿಸಿ, 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು 45 ವರ್ಷ ಮೇಲ್ಪಟ್ಟವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡಿ, ಪ್ರಾಥಮಿಕಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲೂ ಸಹ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ಹೇಳಿದರು.
ಜಿಲ್ಲೆಯಾದ್ಯಂತಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆಯಾಗುತ್ತಿರುವಕುರಿತು ಪರಿಶೀಲಿಸಿ, ಸರ್ಕಾರದ ಸೂಚನೆಯಂತೆ ಮಾಸ್ಕ್ಧರಿಸದಿರುವ ಮತ್ತು ಸಾಮಾಜಿಕಅಂತರ ಪಾಲನೆ ಮಾಡದವರ ವಿರುದ್ಧದಂಡ ವಿಧಿಸುವುದರಜೊತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದರು. ಸಭೆಯಲ್ಲಿಜಿಲ್ಲಾಧಿಕಾರಿಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ಭಟ್, ಎಎಸ್ಪಿ ಕುಮಾರಚಂದ್ರ, ಡಿಹೆಚ್ಓಡಾ.ಸುದೀರ್ಚಂದ್ರ ಸೂಡಾ, ಜಿಲ್ಲಾ ಸರ್ಜನ್ಡಾ.ಮಧುಸೂದನ್ನಾಯಕ್, ಕೋವಿಡ್ ವಿಶೇಷಾಧಿಕಾರಿಡಾ.ಪ್ರೇಮಾನಂದ ಹಾಗೂ ಆರೋಗ್ಯಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…