ಉಡುಪಿ,: ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಸುಮಾರು 60,000 ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು 4 ದಿನಗಳಲ್ಲಿ ಸಂಪೂರ್ಣವಾಗಿ ನೀಡುವ ಗುರಿ ಹೊಂದಲಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ವರಿಗೆ ಮೊದಲನೇ ಡೋಸ್ ಕೋವಿಡ್ ಲಸಿಕೆಯನ್ನು 96.3% ಹಾಗೂ ಎರಡು ಡೋಸ್ಗಳನ್ನು 84.3% ನೀಡಿದ್ದು, 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ನಿಂದ ರಕ್ಷಣೆ ನೀಡಲು ಲಸಿಕೆ ನೀಡುವ ಕಾರ್ಯವನ್ನು ಪ್ರಸ್ತುತ ಆರಂಭಿಸಿದ್ದು, ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು, ಇದು ಅತ್ಯಂತ ಸುರಕ್ಷಿತವಾಗಿದೆ. ಅರ್ಹ ಎಲ್ಲಾ ಮಕ್ಕಳು ಕೋವಿಡ್ ಲಸಿಕೆ ಪಡೆಯುವ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು. ಪೋಷಕರು ಸಹ ಈ ಕಾರ್ಯಕ್ರಮಕ್ಕೆ ಸಹಕರಿಸಬೇಕು. ಮುಂದಿನ ದಿನಗಳಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಕೂಡ ಲಸಿಕೆ ಬರಲಿದೆ ಎಂದು ಶಾಸಕರು ಹೇಳಿದರು.
ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಕೋವಿಡ್ ಹರಡುವುದನ್ನು ನಿಯಂತ್ರಿಸಲು ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಿದ್ದಲ್ಲಿ ಮಾತ್ರ ಇದರ ನಿಯಂತ್ರಣ ಸಾಧ್ಯವಾಗಲಿದೆ. ಪರ್ಯಾಯ ಮಹೋತ್ಸವ ಕಾರ್ಯಕ್ರಮದಲ್ಲಿ ಸಹ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದವರು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ರಘುಪತಿ ಭಟ್ ಹೇಳಿದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಮಕ್ಕಳು ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ನಿಂದ ಸಂಪೂರ್ಣ ಸುರಕ್ಷೆ ಪಡೆಯಲಿದ್ದು, ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಲಿದೆ. ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಸೂಚಿಸುವ ಎಲ್ಲಾ ಮಾರ್ಗಸೂಚಿಗಳನ್ನು ಮತ್ತು ಕೋವಿಡ್ ಸಮುಚಿತ ವರ್ತನೆಗಳನ್ನು ಎಲ್ಲಡೆ ಪಾಲಿಸಬೇಕು. ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯಬೇಕು ಮತ್ತು ರೋಗ ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ನಿಟ್ಟೂರು ಪ್ರೌಢಶಾಲೆಯ ಪ್ರಾಂಶುಪಾಲೆ ಅನುಸೂಯ ಉಪಸ್ಥಿತರಿದ್ದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…