ಉಡುಪಿ: ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್ ಪಡಿತರ ಕಾರ್ಡುಗಳಿದ್ದು, ಒಟ್ಟು 1.92 ಲಕ್ಷ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ಅವುಗಳ ನೈಜತೆ ಕುರಿತಂತೆ ಈಗ ಸರ್ವೆ ನಡೆಸಲಾಗುತ್ತಿದೆ. ಅದನ್ನು ಶೇ.40ಕ್ಕೆ ಇಳಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತಿದ್ದ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೂಲಕ ಪ್ರತಿಯೊಬ್ಬ ಕಾರ್ಡುದಾರರ ಆದಾಯ ಹಾಗೂ ಇತರ ವಿಷಯಗಳ ತನಿಖೆ ನಡೆಸಲಾಗುತ್ತಿದೆ. ಅದೇ ರೀತಿ ಬಿಪಿಎಲ್ ಕಾರ್ಡ್ ಪಡೆದಿರುವ ಸರಕಾರಿ ನೌಕರರಿಂದ ಕಾರ್ಡ್ ಹಿಂಪಡೆದು ದಂಡ ವಸೂಲಿ ಮಾಡಲಾಗುತ್ತದೆ ಎಂದರು.
ಈ ವೇಳೆ ಬಡ, ನೈಜ ಫಲಾನುಭವಿಗಳಿಗೆ ಯಾವುದೇ ತೊಂದರೆ ಯಾಗದಂತೆ ನೋಡಿಕೊಳ್ಳಲಾಗುವುದು. ಕಾನೂನಿಗೆ ವಿರುದ್ಧವಾಗಿ ಬಿಪಿಎಲ್ ಕಾರ್ಡ್ ಪಡೆದವರು ಸುವೋಮೋಟೊ ಆಗಿ ಕಾರ್ಡ್ನ್ನು ಹಿಂದಿರುಗಿಸಿ ಎಂದು ಮನಿ ಮಾಡಿದ ಅವರು, ಬೇಕಿದ್ದರೆ ತಮ್ಮ ಅಗತ್ಯತೆಗಾಗಿ ಎಪಿಎಲ್ ಕಾರ್ಡು ಪಡೆದುಕೊಳ್ಳಬಹುದು. ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ನ ದುರುಪಯೋಗ ವಾಗದಂತೆ ನೋಡಿಕೊಳ್ಳಲಾಗುವುದು. ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದಿರುವುದು ಕಂಡುಬಂದರೆ ಕ್ರಮ ಜರಗಿಸಲಾಗುವುದು ಎಂದರು.
ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯ ಕೆಲವರಿಗೆ ಹಣ ಬಾರದಿರುವ ಕುರಿತು ಜಿಲ್ಲಾಧಿಕಾರಿಗಳನ್ನು ಪ್ರಶ್ನಿಸಿದಾಗ, ಜಿಲ್ಲೆಯ 452 ಮಂದಿಯಿಂದ ಇನ್ಕಮ್ ಟ್ಯಾಕ್ಸ್ ರಿಟರ್ನ್ ಕುರಿತಂತೆ ಸ್ಪಷ್ಟನೆಯನ್ನು ಕೇಳಲಾಗಿದೆ. ಅವರಿಂದ ದೃಢೀಕರಣ ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…