ಉಡುಪಿ: ಜಿಲ್ಲೆಯಲ್ಲಿ ಸದ್ಯ ಶೇ.85ರಷ್ಟು ಬಿಪಿಎಲ್ ಪಡಿತರ ಕಾರ್ಡುಗಳಿದ್ದು, ಒಟ್ಟು 1.92 ಲಕ್ಷ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ಅವುಗಳ ನೈಜತೆ ಕುರಿತಂತೆ ಈಗ ಸರ್ವೆ ನಡೆಸಲಾಗುತ್ತಿದೆ. ಅದನ್ನು ಶೇ.40ಕ್ಕೆ ಇಳಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತಿದ್ದ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೂಲಕ ಪ್ರತಿಯೊಬ್ಬ ಕಾರ್ಡುದಾರರ ಆದಾಯ ಹಾಗೂ ಇತರ ವಿಷಯಗಳ ತನಿಖೆ ನಡೆಸಲಾಗುತ್ತಿದೆ. ಅದೇ ರೀತಿ ಬಿಪಿಎಲ್ ಕಾರ್ಡ್ ಪಡೆದಿರುವ ಸರಕಾರಿ ನೌಕರರಿಂದ ಕಾರ್ಡ್ ಹಿಂಪಡೆದು ದಂಡ ವಸೂಲಿ ಮಾಡಲಾಗುತ್ತದೆ ಎಂದರು.
ಈ ವೇಳೆ ಬಡ, ನೈಜ ಫಲಾನುಭವಿಗಳಿಗೆ ಯಾವುದೇ ತೊಂದರೆ ಯಾಗದಂತೆ ನೋಡಿಕೊಳ್ಳಲಾಗುವುದು. ಕಾನೂನಿಗೆ ವಿರುದ್ಧವಾಗಿ ಬಿಪಿಎಲ್ ಕಾರ್ಡ್ ಪಡೆದವರು ಸುವೋಮೋಟೊ ಆಗಿ ಕಾರ್ಡ್ನ್ನು ಹಿಂದಿರುಗಿಸಿ ಎಂದು ಮನಿ ಮಾಡಿದ ಅವರು, ಬೇಕಿದ್ದರೆ ತಮ್ಮ ಅಗತ್ಯತೆಗಾಗಿ ಎಪಿಎಲ್ ಕಾರ್ಡು ಪಡೆದುಕೊಳ್ಳಬಹುದು. ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ನ ದುರುಪಯೋಗ ವಾಗದಂತೆ ನೋಡಿಕೊಳ್ಳಲಾಗುವುದು. ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದಿರುವುದು ಕಂಡುಬಂದರೆ ಕ್ರಮ ಜರಗಿಸಲಾಗುವುದು ಎಂದರು.
ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯ ಕೆಲವರಿಗೆ ಹಣ ಬಾರದಿರುವ ಕುರಿತು ಜಿಲ್ಲಾಧಿಕಾರಿಗಳನ್ನು ಪ್ರಶ್ನಿಸಿದಾಗ, ಜಿಲ್ಲೆಯ 452 ಮಂದಿಯಿಂದ ಇನ್ಕಮ್ ಟ್ಯಾಕ್ಸ್ ರಿಟರ್ನ್ ಕುರಿತಂತೆ ಸ್ಪಷ್ಟನೆಯನ್ನು ಕೇಳಲಾಗಿದೆ. ಅವರಿಂದ ದೃಢೀಕರಣ ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…