Featured

ಉಡುಪಿ : ಜಿಲ್ಲೆಯಲ್ಲೊಂದು ಮಾದರಿ ವಿವಾಹ ಕಾರ್ಯಕ್ರಮ : ಹಿರಿಯರ ಸ್ಥಾನದಲ್ಲಿ ನಿಲ್ಲುವ ಮೂಲಕ ಹೆಣ್ಣೊಬ್ಬಳ ಭವಿಷ್ಯ ರೂಪಿಸಲು ಮುಂದಾದ ಸರಕಾರ – Vishwanews24

ಉಡುಪಿ : ಜಿಲ್ಲೆಯಲ್ಲೊಂದು ಮಾದರಿ ವಿವಾಹ ಕಾರ್ಯಕ್ರಮ : ಹಿರಿಯರ ಸ್ಥಾನದಲ್ಲಿ ನಿಲ್ಲುವ ಮೂಲಕ ಹೆಣ್ಣೊಬ್ಬಳ ಭವಿಷ್ಯ ರೂಪಿಸಲು ಮುಂದಾದ ಸರಕಾರ

ಉಡುಪಿ : ಜಿಲ್ಲೆಯಲ್ಲೊಂದು ಮಾದರಿ ವಿವಾಹ ಕಾರ್ಯಕ್ರಮಕ್ಕೆ ತಯಾರಿ ನಡೆದಿದೆ. ಇಲ್ಲಿ ಸರಕಾರವೇ ಕುಟುಂಬದ ಹಿರಿಯರ ಸ್ಥಾನದಲ್ಲಿ ನಿಲ್ಲುವ ಮೂಲಕ ಮಹಿಳಾ ನಿಲಯದ ಹೆಣ್ಣೊಬ್ಬಳ ಕೌಟುಂಬಿಕ ಬದುಕಿನ ಭವಿಷ್ಯ ರೂಪಿಸಲು ಮುಂದಾಗಿರುವುದು ವಿಶೇಷ.

ಮನೆಯವರಿಂದ ದೂರವಾಗಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ನಿಟ್ಟೂರು ಮಹಿಳಾ ನಿಲಯದಲ್ಲಿ ಆಶ್ರಯ ಪಡೆದಿರುವ 25ರ ಹರೆಯದ ಯುವತಿಗೆ ವಿವಾಹ ಯೋಗ ಕೂಡಿಬಂದಿದೆ. ಹೊರ ಜಿಲ್ಲೆಯ ಕೃಷಿ ಕುಟುಂಬದ ಹಿನ್ನೆಲೆಯ 29ರ ಹರೆಯದ ಯುವಕ ವರ.

ಯುವಕನೇ ಮದುವೆಯ ಪ್ರಸ್ತಾವ ಇಟ್ಟಿದ್ದು, ಆತನ ಜಿಲ್ಲೆಯ ಅಧಿಕಾರಿಗಳ ಮೂಲಕ ಯುವಕನ ಗುಣ-ನಡತೆ, ಕುಟುಂಬಿಕರ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ. ಈ ವರದಿಗಳನ್ನು ರಾಜ್ಯ ಮಹಿಳಾ ನಿಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೂ ಆಗಿರುವ ಉಡುಪಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿ ಅನುಮೋದನೆ ನೀಡಿದ್ದು, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ವಿವಾಹಕ್ಕೆ ಒಪ್ಪಿಗೆ ನೀಡಿದ್ದಾರೆ.

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನಾ ಧರಣಿ ಆರಂಭ : ಪೊಲೀಸ್ ಬಿಗಿ ಭದ್ರತೆ – Vishwanews24

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ವಿವಾಹ ಖರ್ಚಿಗೆ 5 ಸಾವಿರ ರೂ. ನೀಡಲಾಗುತ್ತದೆ. 15 ಸಾವಿರ ರೂ.ಗಳನ್ನು ಯುವತಿಯ ಹೆಸರಿನಲ್ಲಿ ಸರಕಾರ ಠೇವಣಿ ಇಡುತ್ತದೆ. ದಾನಿಗಳೂ ನೆರವಿಗೆ ಮುಂದೆ ಬಂದಿದ್ದು, ಜ್ಯೇಷ್ಠ ಡೆವಲಪರ್ಸ್‌ ಸಂಸ್ಥೆಯು ಯುವತಿಗೆ ಕರಿಮಣಿ ಸರ, ಮದುವೆಯ ಸೀರೆ ನೀಡಲಿದೆ. ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್‌ ಯುವತಿಗೆ ಜವುಳಿಯನ್ನು ನೀಡಲಿದ್ದಾರೆ. ಅಂಬಲಪಾಡಿ ದೇವಸ್ಥಾನದಿಂದ ಮಧ್ಯಾಹ್ನದೂಟದ ವ್ಯವಸ್ಥೆಯಾಗಿದೆ. ಮಹಿಳಾ ನಿಲಯದ ಎಲ್ಲ ನಿಲಯಾರ್ಥಿಗಳು, ಸಿಬಂದಿ, ಅಧಿಕಾರಿ ವರ್ಗ ಪ್ರಸ್ತುತ ಮದುವೆ ತಯಾರಿಯಲ್ಲಿ ಸಂಭ್ರಮದಿಂದ ತೊಡಗಿಸಿಕೊಂಡಿದ್ದಾರೆ.

ಆಮಂತ್ರಣ ಪತ್ರಿಕೆಯ ವಿಶೇಷ
ಕರ್ನಾಟಕದ ಸರಕಾರದ ಲಾಂಛನ, ಆದಿ ಪೂಜಿತ ಗಣಪತಿ ದೇವರ ಚಿತ್ರದೊಂದಿಗೆ ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ನಿಲಯ, ಉಡುಪಿ ಆಯೋಜಕರು. ವಧು-ವರನ ಹೆಸರು ಮುದ್ರಿಸಿ ನಿಟ್ಟೂರು ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಸಮಾರಂಭವು ಅ. 28ರಂದು ಶುಭ ಮುಹೂರ್ತದಲ್ಲಿ ನೆರವೇರಲಿದೆ ಎಂದು ಬರೆದಿದೆ. ಜಿಲ್ಲಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ರಾಜ್ಯ ಮಹಿಳಾ ನಿಲಯ ಅಧೀಕ್ಷಕರು ಶುಭಾಕಾಂಕ್ಷಿಗಳಾಗಿದ್ದಾರೆ. ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರನ್ನು ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಮಂತ್ರಣ ಪತ್ರಿಕೆ ಕಳುಹಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ.. ಯಶ್‌ಪಾಲ್ ಸುವರ್ಣ ಅಂಗರಕ್ಷಕನಿಗೆ ಗಾಯ – Vishwanews24

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಜ್ಯ ಮಹಿಳಾ ನಿಲಯದ ವತಿಯಿಂದ ಪ್ರಸ್ತಾವ ಪರಿಶೀಲಿಸಿ ವಿವಾಹ ನೆರವೇರಿಸುವ ಬಗ್ಗೆ ವರದಿ ನೀಡಿದ್ದರು. ಅದರಂತೆ ಎಲ್ಲ ಮಾರ್ಗಸೂಚಿಗಳನ್ನು ಅನುಸರಿಸಿ ಸಮಿತಿ ಒಪ್ಪಿಗೆ ನೀಡಲಾಗಿದೆ.
– ಕೂರ್ಮಾ ರಾವ್‌ ಎಂ. ಉಡುಪಿ ಜಿಲ್ಲಾಧಿಕಾರಿ

ಮದುವೆ ಪ್ರಸ್ತಾವ ಬಂದ ಅನಂತರ 6 ತಿಂಗಳು ಕಾಲ ಎಲ್ಲ ಬಗೆಯ ಪರಿಶೀಲನೆ, ಪ್ರಕ್ರಿಯೆ ನಡೆದಿದೆ. ನಿಟ್ಟೂರು ಮಹಿಳಾ ನಿಲಯದಲ್ಲಿ ಸರಳವಾಗಿ ಶಾಸ್ತ್ರೋಕ್ತವಾಗಿ ವಿವಾಹ ಸಮಾರಂಭ ಜರಗಲಿದೆ.
-ವೀಣಾ ವಿವೇಕಾನಂದ, ಉಪ ನಿರ್ದೇಶಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago