ಉಡುಪಿ: ಸ್ವಯಂ ಚಾಲಿತ ವಾಹನ ನೋಂದಣಿ ಸಂಖ್ಯೆ ಗುರುತಿಸುವ(ಎಎನ್ಪಿಆರ್) ಕ್ಯಾಮೆರಾಗಳನ್ನು ಜಿಲ್ಲೆಯ ಆರು ಕಡೆಗಳಲ್ಲಿ ಅಳವಡಿಸಿದ್ದು, ಇದರಿಂದ ಜಿಲ್ಲೆಯಾದ್ಯಂತ ಪ್ರಮುಖ ಎಲ್ಲಾ ಸಂಚಾರ ನಿಯಮ ಉಲ್ಲಂಘನೆಗಳಲ್ಲಿ ಶೇ.40ರಿಂದ ಶೇ.70ರವರೆಗೆ ಇಳಿಕೆ ಕಂಡು ಬಂದಿದೆ.
ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಚಾರವನ್ನು ಪರಿಣಾಮಕಾರಿಯಾಗಿ ನಿರ್ವ ಹಿಸಲು ಹಾಗೂ ತಂತ್ರಜ್ಞಾನದ ಮೂಲಕ ಸಂಚಾರ ನಿಯಮಗಳ ಜಾರಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ದಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಉಡುಪಿ ಜಿಲ್ಲೆಯ ಪಡುಬಿದ್ರಿ- ಉಚ್ಚಿಲ, ಕಾಪು-ದಂಡತೀರ್ಥ, ಕೋಟ- ತೆಕ್ಕಟ್ಟೆ, ಗಂಗೊಳ್ಳಿ- ತ್ರಾಸಿ, ಬೈಂದೂರು- ಕೆರ್ಗಾಲ್ ಮತ್ತು ಕಾರ್ಕಳ- ದೂಪದಕಟ್ಟೆಗಳಲ್ಲಿ ಒಟ್ಟು ಆರು ಎಎನ್ಪಿಆರ್ ಕ್ಯಾಮೆರಾಗಳನ್ನು ಅಳವಡಿಸಿ, ಮೇ 21ರಂದು ಅನುಷ್ಠಾನ ಮಾಡಲಾಗಿತ್ತು.
ಇದನ್ನೂ ಓದಿ :
ಇಲ್ಲಿನ ಕ್ಯಾಮೆರಾಗಳು ವಾಹನದ ನೋಂದಣಿ ಸಂಖ್ಯೆಯನ್ನು ಸ್ವಯಂ ಚಾಲಿತವಾಗಿ ಗುರುತಿಸಿ, ವಾಹನದ ಮಾಲಕರ ವಿವರಗಳು ಹಾಗೂ ನಡೆದಿರುವ ಸಂಚಾರ ನಿಯಮ ಉಲ್ಲಂಘನೆಯ ಮಾಹಿತಿಯನ್ನು ದಾಖಲಿಸುತ್ತದೆ. ದಾಖಲಾದ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ಇ-ಚಲನ್ ನೋಟಿಸ್ಗಳನ್ನು ಸ್ವಯಂಚಾಲಿತವಾಗಿ ಸಿದ್ಧಪಡಿಸಿ, ಸಂಬಂಧಿತ ವಾಹನದ ಮಾಲಕರಿಗೆ ಕಳುಹಿಸಲಾಗುತ್ತದೆ. ಈವರೆಗೆ ಒಟ್ಟು 2,700 ಇ-ಚಲನ್ಗಳನ್ನು ಜಾರಿ ಮಾಡಲಾಗಿದೆ.
ಈ ಯೋಜನೆ ಜಾರಿಯಾದ ಮೊದಲ ವಾರ ಹಾಗೂ ಇತ್ತೀಚಿನ ವಾರದ ಸಂಚಾರ ನಿಯಮ ಉಲ್ಲಂಘನೆಗಳ ಹೋಲಿಕೆ ಮಾಡಿದರೆ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ಸಾಕಷ್ಟು ಇಳಿಮುಖವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಇದನ್ನೂ ಓದಿ :
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…