ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ.
ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು ಕಣ್ಣಿನ ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣವಾಗಿದೆ. ಇದು ಬಹುಬೇಗನೆ ಹರಡುವ ರೋಗವಾಗಿದೆ. ಬಾಧಿತರು ಪದೇ ಪದೇ ಕಣ್ಣನ್ನು ಉಜ್ಜಬಾರದು ಎನ್ನುತ್ತಾರೆ ವೈದ್ಯರು.
ಕಾರ್ಕಳದಲ್ಲಿ ಗರಿಷ್ಠ: ಉಡುಪಿ ತಾಲೂಕಿನಲ್ಲಿ ನವೆಂಬರ್ನಲ್ಲಿ 60, ಡಿಸೆಂಬರ್ನಲ್ಲಿ ಈವರೆಗೆ 15, ಕುಂದಾಪುರ ತಾಲೂಕಿನಲ್ಲಿ ನವೆಂಬರ್ನಲ್ಲಿ 80, ಡಿಸೆಂಬರ್ನಲ್ಲಿ 117, ಕಾರ್ಕಳದಲ್ಲಿ ನವೆಂಬರ್ಗೆ 124, ಡಿಸೆಂಬರ್ನಲ್ಲಿ 395 ಮಂದಿಗೆ ಕೆಂಗಣ್ಣು ಬಾಧಿಸಿದೆ.
ಕೆಂಗಣ್ಣು ಕಾಯಿಲೆ ಅತೀ ಶೀಘ್ರವಾಗಿ ಇನ್ನೊಬ್ಬರಿಗೆ ಹರಡುತ್ತದೆ. ಈಗಾಗಲೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ರೋಗ ಬಂದು ಹೋಗಿವೆ. ಇದಕ್ಕೆಂದೇ ಕೆಲವು ವಿದ್ಯಾರ್ಥಿಗಳು ರಜೆ ತೆಗೆದುಕೊಂಡ ಘಟನೆಗಳೂ ಜಿಲ್ಲೆಯಲ್ಲಿ ನಡೆದಿವೆ.
ಶೀತ, ಜ್ವರ ಪ್ರಕರಣ:
ಜಿಲ್ಲೆಯಲ್ಲಿ ಶೀತ, ಜ್ವರ ಪ್ರಕರಣದಲ್ಲಿಯೂ ಹೆಚ್ಚಳ ಕಂಡುಬಂದಿದೆ. ನವೆಂಬರ್ನಲ್ಲಿ ಉಡುಪಿ ತಾಲೂಕಿನಲ್ಲಿ 1,456, ಕುಂದಾಪುರದಲ್ಲಿ 1,145, ಕಾರ್ಕಳ 1,087, ಡಿಸೆಂಬರ್ ತಿಂಗಳಲ್ಲಿ ಉಡುಪಿ ತಾಲೂಕಿನಲ್ಲಿ 324, ಕುಂದಾಪುರ 224, ಕಾರ್ಕಳದಲ್ಲಿ 191 ಮಂದಿಗೆ ವಿವಿಧ ರೀತಿಯ ಜ್ವರ ಹಾಗೂ ಶೀತ ಲಕ್ಷಣಗಳು ಕಂಡುಬಂದಿವೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…