Featured

ಉಡುಪಿ : ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ – Vishwanews24

ಉಡುಪಿ : ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ

ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ.

ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು ಕಣ್ಣಿನ ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಇದರ ಲಕ್ಷಣವಾಗಿದೆ. ಇದು ಬಹುಬೇಗನೆ ಹರಡುವ ರೋಗವಾಗಿದೆ. ಬಾಧಿತರು ಪದೇ ಪದೇ ಕಣ್ಣನ್ನು ಉಜ್ಜಬಾರದು ಎನ್ನುತ್ತಾರೆ ವೈದ್ಯರು.

ಕಾರ್ಕಳದಲ್ಲಿ ಗರಿಷ್ಠ: ಉಡುಪಿ ತಾಲೂಕಿನಲ್ಲಿ ನವೆಂಬರ್‌ನಲ್ಲಿ 60, ಡಿಸೆಂಬರ್‌ನಲ್ಲಿ ಈವರೆಗೆ 15, ಕುಂದಾಪುರ ತಾಲೂಕಿನಲ್ಲಿ ನವೆಂಬರ್‌ನಲ್ಲಿ 80, ಡಿಸೆಂಬರ್‌ನಲ್ಲಿ 117, ಕಾರ್ಕಳದಲ್ಲಿ ನವೆಂಬರ್‌ಗೆ 124, ಡಿಸೆಂಬರ್‌ನಲ್ಲಿ 395 ಮಂದಿಗೆ ಕೆಂಗಣ್ಣು ಬಾಧಿಸಿದೆ.

ಕೆಂಗಣ್ಣು ಕಾಯಿಲೆ ಅತೀ ಶೀಘ್ರವಾಗಿ ಇನ್ನೊಬ್ಬರಿಗೆ ಹರಡುತ್ತದೆ. ಈಗಾಗಲೇ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ರೋಗ ಬಂದು ಹೋಗಿವೆ. ಇದಕ್ಕೆಂದೇ ಕೆಲವು ವಿದ್ಯಾರ್ಥಿಗಳು ರಜೆ ತೆಗೆದುಕೊಂಡ ಘಟನೆಗಳೂ ಜಿಲ್ಲೆಯಲ್ಲಿ ನಡೆದಿವೆ.

ಶೀತ, ಜ್ವರ ಪ್ರಕರಣ:

ಜಿಲ್ಲೆಯಲ್ಲಿ ಶೀತ, ಜ್ವರ ಪ್ರಕರಣದಲ್ಲಿಯೂ ಹೆಚ್ಚಳ ಕಂಡುಬಂದಿದೆ. ನವೆಂಬರ್‌ನಲ್ಲಿ ಉಡುಪಿ ತಾಲೂಕಿನಲ್ಲಿ 1,456, ಕುಂದಾಪುರದಲ್ಲಿ 1,145, ಕಾರ್ಕಳ 1,087, ಡಿಸೆಂಬರ್‌ ತಿಂಗಳಲ್ಲಿ ಉಡುಪಿ ತಾಲೂಕಿನಲ್ಲಿ 324, ಕುಂದಾಪುರ 224, ಕಾರ್ಕಳದಲ್ಲಿ 191 ಮಂದಿಗೆ ವಿವಿಧ ರೀತಿಯ ಜ್ವರ ಹಾಗೂ ಶೀತ ಲಕ್ಷಣಗಳು ಕಂಡುಬಂದಿವೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago