ಉಡುಪಿ: ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ ಇಂದು ಚುರುಕುಗೊಂಡಿದೆ. ಮುಂಜಾನೆಯಿಂದ ಉಡುಪಿ ಜಿಲ್ಲೆಯಾದ್ಯಂತ ಅಲ್ಲಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಜಿಲ್ಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾಪು ಕುಂದಾಪುರದಲ್ಲಿ ಧಾರಾಕಾರ ಮಳೆ ಸುರಿದಿದೆ. ನಗರ ಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ಓಡಾಟಕ್ಕೆ ವ್ಯತ್ಯಯವಾಗಿದೆ. ಪ್ರಮುಖ ರಸ್ತೆಗಳಲ್ಲಿ ಸ್ಲೋ ಮೂವಿಂಗ್ ಟ್ರಾಫಿಕ್ ಕಾಣಿಸಿಕೊಂಡಿತು. ಜಿಟಿಜಿಟಿ ಮಳೆಗೆ ವಾಹನ ಸವಾರರು ಪರದಾಡಬೇಕಾಯಿತು.
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಶುಕ್ರವಾರ ಮತ್ತು ಶನಿವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಪ್ರತಿ ದಿನ ಸುಮಾರು 100 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಮೋಡಮುಸುಕಿದ ವಾತಾವರಣ ಮುಂದುವರಿದಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳ ಮಟ್ಟ ವಿಪರೀತ ಏರಿಕೆಯಾಗುತ್ತಿದೆ. ಸಮುದ್ರ ಮತ್ತು ನದಿ ತೀರದ ಜನಕ್ಕೆ ಉಡುಪಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…