ಉಡುಪಿ: ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ ಇಂದು ಚುರುಕುಗೊಂಡಿದೆ. ಮುಂಜಾನೆಯಿಂದ ಉಡುಪಿ ಜಿಲ್ಲೆಯಾದ್ಯಂತ ಅಲ್ಲಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಜಿಲ್ಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾಪು ಕುಂದಾಪುರದಲ್ಲಿ ಧಾರಾಕಾರ ಮಳೆ ಸುರಿದಿದೆ. ನಗರ ಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ಓಡಾಟಕ್ಕೆ ವ್ಯತ್ಯಯವಾಗಿದೆ. ಪ್ರಮುಖ ರಸ್ತೆಗಳಲ್ಲಿ ಸ್ಲೋ ಮೂವಿಂಗ್ ಟ್ರಾಫಿಕ್ ಕಾಣಿಸಿಕೊಂಡಿತು. ಜಿಟಿಜಿಟಿ ಮಳೆಗೆ ವಾಹನ ಸವಾರರು ಪರದಾಡಬೇಕಾಯಿತು.
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಶುಕ್ರವಾರ ಮತ್ತು ಶನಿವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಪ್ರತಿ ದಿನ ಸುಮಾರು 100 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಮೋಡಮುಸುಕಿದ ವಾತಾವರಣ ಮುಂದುವರಿದಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳ ಮಟ್ಟ ವಿಪರೀತ ಏರಿಕೆಯಾಗುತ್ತಿದೆ. ಸಮುದ್ರ ಮತ್ತು ನದಿ ತೀರದ ಜನಕ್ಕೆ ಉಡುಪಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…