ಉಡುಪಿ: ನೆರೆಯ ದೇಶ ಬಾಂಗ್ಲಾದಲ್ಲಿ ಅಲ್ಪ ಸಂಖ್ಯಾತರಾದ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ಹಾಗೂ ದಬ್ಬಾಳಿಕೆ ಮಾಡುತ್ತಿರುವುದನ್ನು ಮನಗಂಡ ಉಡುಪಿ ಜಿಲ್ಲಾ ಶ್ರೀರಾಮಸೇನೆಯು ಉಡುಪಿ ಜಿಲ್ಲೆಯಿಂದ ಬಾಂಗ್ಲಾ ವಲಸಿಗರು ಹಾಗೂ ರೋಹಿಂಗ್ಯಾ ರನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಅಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರಿಗೆ ಮನವಿ ಮಾಡಿ ಆಗ್ರಹಿಸಿತು.
ಆಂತರಿಕ ಮೀಸಲಾತಿಯಿಂದ ಗಲಭೆಯಾಗಿ ಹಿಂದೂಗಳ ಮೇಲೆ ಅಮಾನುಷವಾಗಿ ದೌರ್ಜನ್ಯ ಎಸಗುತ್ತಿದ್ದಾರೆ. ಹಿಂದೂ ಮಂದಿರ, ದೇವಸ್ಥಾನ ಲೂಟಿ, ಹಿಂದೂಗಳ ಮನೆ ಮೇಲೆ ಆಕ್ರಮಣ, ಹಿಂದೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮುಂತಾದ ರಾಕ್ಷಶಿ ಕೃತ್ಯಗಳು ನಡೆಯುತ್ತಿದೆ.1971 ರಲ್ಲಿ ಬಾಂಗ್ಲಾ ದೇಶವಾದಾಗ 21% ಹಿಂದುಗಳು ಇದ್ದರು. ಈಗ ಇರುವ ಹಿಂದುಗಳು ಕೇವಲ 1% ಮಾತ್ರ. ಅವರು ಭಯಭೀತರಾಗಿ ಕಂಗೆಟ್ಟಿದ್ದಾರೆ.
ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ಮುಸ್ಲಿಂ ಹಾಗೂ ಬರ್ಮ ರೋಹಿಂಗ್ಯಾ ಮುಸ್ಲಿಮರು 10 ಲಕ್ಷಕ್ಕೂ ಅಧಿಕವಾಗಿ, ಅನಧಿಕೃತವಾಗಿ ನೆಲೆಸಿದ್ದಾರೆ. ಇವರನ್ನು ಶಿಕ್ಷಿಸುವುದು ಹಾಗೂ ರಾಜ್ಯ ಮತ್ತು ನಮ್ಮ ಜಿಲ್ಲೆಯಿಂದ ಹೊರಹಾಕುವುದು ಘನವೆತ್ತ ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿರುತ್ತದೆ. ಬಾಂಗ್ಲಾ ಮುಸ್ಲಿಂರು ಹಾಗೂ ರೋಹಿಂಗ್ಯಾಗಳು ಕಾನೂನು ಭಾಹಿರ ಚಟುವಟಿಕೆ ಅಲ್ಲದೇ ದೇಶದ ಭದ್ರತೆಗೆ ಕಂಟಕವಾಗಿದ್ದಾರೆ.ಹಾಗಾಗಿ ಕೂಡಲೇ ದೇಶದ್ರೋಹಿ ನುಸುಳುಕೊರರಾದ ಬಾಂಗ್ಲಾ ಮುಸ್ಲಿಂ ಮತ್ತು ರೋಹಿಂಗ್ಯಾ ಗಳನ್ನು ನಮ್ಮ ಜಿಲ್ಲೆ ಹಾಗೂ ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಶ್ರೀರಾಮಸೇನೆಯ ಮುಖಂಡರು ಆಗ್ರಹಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…