Featured

ಉಡುಪಿ : ಜಿಲ್ಲೆಯ ಅಕ್ರಮ ಹೋಂಸ್ಟೇ  ರೆಸಾರ್ಟ್‌ಗಳಿಗೆ ಸಕ್ರಮ ಮಾಡಲು ಒಂದು ತಿಂಗಳ ಗಡುವು : ಜಿಲ್ಲಾಧಿಕಾರಿ ಎಚ್ಚರಿಕೆ – vishwanews24

ಉಡುಪಿ : ಜಿಲ್ಲೆಯ ಅಕ್ರಮ ಹೋಂಸ್ಟೇ  ರೆಸಾರ್ಟ್‌ಗಳಿಗೆ ಸಕ್ರಮ ಮಾಡಲು ಒಂದು ತಿಂಗಳ ಗಡುವು : ಜಿಲ್ಲಾಧಿಕಾರಿ ಎಚ್ಚರಿಕೆ

ಮಣಿಪಾಲ: ಜಿಲ್ಲೆಯಲ್ಲಿ ಅಕ್ರಮವಾಗಿ ಹೋಂಸ್ಟೇ, ರೆಸಾರ್ಟ್‌ ನಡೆಸುತ್ತಿರುವವರು ಒಂದು ತಿಂಗಳೊಳಗೆ ಸಕ್ರಮ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಹೋಂಸ್ಟೇ, ರೆಸಾರ್ಟ್‌ ಮಾಲಕರ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರಸ್ತುತ ಸುಮಾರು 200 ಹೋಂ ಸ್ಟೇಗಳು ಅಧಿಕೃತವಾಗಿ ನಡೆಯುತ್ತಿವೆ. ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಒಂದು ವರ್ಷದಿಂದ ಸಕ್ರಮಕ್ಕೆ ಸೂಚನೆ ನೀಡುತ್ತಿದ್ದರೂ ನಿರ್ಲಕ್ಷಿಸಲಾಗಿದೆ. ಮುಂದಿನ ಒಂದು ತಿಂಗಳಲ್ಲಿ ಸಕ್ರಮ ಮಾಡಿಕೊಳ್ಳದಿದ್ದರೆ ಕ್ರಮ ಅನಿವಾರ್ಯ. ಜೊತೆಗೆ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿಲ್ಲ ಎಂದು ಜಿಲ್ಲಾಡಳಿತಕ್ಕೆ ಮುಚ್ಚಳಿಕೆ ಬರೆದುಕೊಡಬೇಕು ಎಂದರು.

ಸರಕಾರಿ ಭೂಮಿ ಹಾಗೂ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಹೋಂಸ್ಟೇ ಕಟ್ಟಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಅಕ್ರಮವಾಗಿ ಕಟ್ಟಿದ್ದರೆ ಕೂಡಲೇ ತೆರವು ಮಾಡಬೇಕು. ಇಲ್ಲವಾದರೆ ತೆರವು ಮಾಡಿಸಲಾಗುವುದು. ಹೋಂ ಸ್ಟೇಗಳಲ್ಲಿ ಮಾಲಕರು ಇರುವುದು ಕಡ್ಡಾಯ. ಒಂದೊಮ್ಮೆ ಮಾಲಕರು ಇಲ್ಲದೇ ಇದ್ದರೆ ಈಗ ಕೇಂದ್ರ ಸರಕಾರ ರೂಪಿಸಿರುವ ಬ್ರೆಡ್‌ ಆ್ಯಂಡ್‌ ಬ್ರೇಕ್‌ಫಾಸ್ಟ್‌ ಯೋಜನೆ (ಬಿಆ್ಯಂಡ್‌ಬಿ)ಯಡಿ ನೋಂದಣಿ ಮಾಡಬೇಕು ಎಂದರು.

ಹೋಂಸ್ಟೇಗಳಿಗೆ ಬರುವ ಪ್ರವಾಸಿಗರನ್ನು ದಟ್ಟಾರಣ್ಯ, ನದಿ, ಬೀಚ್‌ಗಳಿಗೆ ರಾತ್ರಿ ವೇಳೆ ಕರೆದುಕೊಂಡು ಹೋಗಿ ಪಾರ್ಟಿ ಆಯೋ ಜನೆ ಮಾಡುವಂತಿಲ್ಲ. ನಡುರಾತ್ರಿ ಡಿಜೆ ಹಾಕಿ ಅಕ್ಕಪಕ್ಕದವರಿಗೆ ಸಮಸ್ಯೆ ನೀಡಬಾರದು ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಮಾತನಾಡಿ, ಹೋಂಸ್ಟೇಗಳಲ್ಲಿ ಪ್ರವಾಸಿಗರ ಮಾಹಿತಿ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು. ಸಿಸಿಟಿವಿ ಅಳವಡಿಕೆ ಕಡ್ಡಾಯ. ಪ್ರವಾಸಿಗರಿಂದ ನಿಮಗೇನಾದರೂ ಸಮಸ್ಯೆಯಾದರೆ ಕೂಡಲೇ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.

ಜಿಪಂ ಸಿಇಒ ಪ್ರತೀಕ್‌ ಬಾಯಲ್‌ ಮಾತನಾಡಿ, ಪ್ರವಾಸಿಗರ ಸುರಕ್ಷತೆಯೂ ಅಷ್ಟೇ ಮುಖ್ಯ. ವಿದೇಶಿ ಪ್ರವಾಸಿಗರು ಬಂದಾಗ ಅವರಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು ಎಂದರು. ಪ್ರವಾಸೋದ್ಯಮ ಇಲಾಖೆಯ ಸ. ನಿರ್ದೇಶಕ ಕುಮಾರ್‌ ಸಿ.ಯು. ನಿರೂಪಿಸಿದರು.

ಹೋಂಸ್ಟೇ, ರೆಸಾರ್ಟ್‌ಗಳ ವಿವರ

ಚಟುವಟಿಕೆ ಅಧಿಕೃತ ಅನಧಿಕೃತ ನವೀಕರಣ ಬಾಕಿ

ಹೋಂ ಸ್ಟೇ 188 102 14

ರೆಸಾರ್ಟ್‌ 36 153 0

ಹೌಸ್‌ಬೋಟ್‌ 4 0 4

ಕಯಾಕಿಂಗ್‌ 21 0 3

ಪ್ರವಾಸಿ ಬೋಟ್‌ 11 0 3

ಟೂರ್/ಟ್ರಾವೆಲ್ಸ್‌ 4 23 0

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

6 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

7 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

20 hours ago