Featured

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ವಿಕಾಸ್ ಪುರಸ್ಕಾರಕ್ಕೆ ರಾಜ್ಯದ ಒಟ್ಟು ಆರು ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿದ್ದು, ಈ ಪೈಕಿ ಐದು ಪಂಚಾಯತ್‌ಗಳು ಉಡುಪಿ ಜಿಲ್ಲೆಯವು ಎಂಬುದು ವಿಶೇಷ.

ಹೆಬ್ರಿ ತಾಲೂಕಿನ ಮುದ್ರಾಡಿ ಮತ್ತು ಮಡಾಮಕ್ಕಿ, ಕುಂದಾಪುರ ತಾಲೂಕಿನ ವಂಡ್ಸೆ ಮತ್ತು ಹಕ್ಲಾಡಿ, ಕಾರ್ಕಳದ ಸಾಣೂರು ಹಾಗೂ ಬೆಂಗಳೂರಿನ ಹಳನಾಯಕಹಳ್ಳಿ ಗ್ರಾಮ ಪಂಚಾಯತ್‌ಗಳು ಈ ಗೌರವಕ್ಕೆ ಪಾತ್ರವಾಗಿವೆ. ಆಯ್ಕೆಯಾದ ಪ್ರತಿ ಗ್ರಾಮ ಪಂಚಾಯತ್‌ಗೆ ಕನಿಷ್ಠ 75 ಲಕ್ಷ ರೂ. ನಿಂದ ಗರಿಷ್ಠ 1.50 ಕೋಟಿ ರೂ. ವರೆಗೆ ನಗದು ಬಹುಮಾನ ದೊರೆಯಲಿದೆ.

ಮುದ್ರಾಡಿ ಗ್ರಾಮ ಪಂಚಾಯತ್ (ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ಪಂಚಾಯತ್ ಪ್ರಶಸ್ತಿ):
ಸ್ತ್ರೀಶಕ್ತಿ ಸಂಘಗಳ ಮೂಲಕ ಸ್ವ-ಉದ್ಯೋಗಕ್ಕೆ ಉತ್ತೇಜನ, ಆಧುನಿಕ ಕೃಷಿ ಯಂತ್ರೋಪಕರಣಗಳ ಬಳಕೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ವಯಂ ಉದ್ಯೋಗ ಯೋಜನೆಗಳ ಸಮರ್ಪಕ ಅನುಷ್ಠಾನ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಹಾಗೂ ಪಡಿತರ ವಿತರಣೆಯಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಮಡಾಮಕ್ಕಿ ಗ್ರಾಮ ಪಂಚಾಯತ್ (ಕುಡಿಯುವ ನೀರಿನ ಸುಸ್ಥಿರ ಯೋಜನೆಯ ಪ್ರಶಸ್ತಿ):
ತನ್ನ ವ್ಯಾಪ್ತಿಯಲ್ಲಿ ನೀರಿನ ಮೂಲಗಳನ್ನು ಸಂರಕ್ಷಿಸಿರುವುದು ಮತ್ತು ಸುಸಜ್ಜಿತ ಕ್ರಮಗಳ ಮೂಲಕ ಪ್ರತಿ ಮನೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುತ್ತಿರುವುದಕ್ಕಾಗಿ ಈ ಮಾನ್ಯತೆ ದೊರೆತಿದೆ.

ವಂಡ್ಸೆ ಗ್ರಾಮ ಪಂಚಾಯತ್ (ಆರೋಗ್ಯ ಸೇವೆಗಳ ಪ್ರಶಸ್ತಿ):
ಆರೋಗ್ಯ ಕೇಂದ್ರದ ಸೇವೆಗಳು, ಘನತ್ಯಾಜ್ಯ ನಿರ್ವಹಣೆ, ಶಾಲೆ ಮತ್ತು ಅಂಗನವಾಡಿಗಳಲ್ಲಿ ಆರೋಗ್ಯ ಚಟುವಟಿಕೆಗಳು, ವಿಶೇಷ ಆರೋಗ್ಯ ಶಿಬಿರಗಳು ಹಾಗೂ ಮುಖ್ಯವಾಗಿ ‘ನೀರಾಮಯ ಸೊಸೈಟಿ’ ಮೂಲಕ ಮನೆಗಳಲಲಿರುವ ಅಶಕ್ತರಿಗೆ ನೀಡಲಾಗುತ್ತಿರುವ ಉಪಶಮನ ಆರೈಕೆ ಆರಂಭಿಸಿರುವುದನ್ನು ಗುರುತಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.

ಹಕ್ಲಾಡಿ ಗ್ರಾಮ ಪಂಚಾಯತ್ (ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಭದ್ರತೆಯುಳ್ಳ ಪಂಚಾಯತ್ ಪ್ರಶಸ್ತಿ):
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ವಿಕಲಚೇತನರು ಹಾಗೂ ದುರ್ಬಲ ವರ್ಗದವರಿಗೆ ಸರ್ಕಾರದ ಅನುದಾನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿರುವುದು, ಎಲ್ಲಾ ಕ್ಷೇತ್ರಗಳಲ್ಲಿ ಶೇ. 80 ಕ್ಕೂ ಹೆಚ್ಚು ಪ್ರಗತಿ ಸಾಧಿಸಿರುವುದು ಮತ್ತು ಉದ್ಯೋಗ ಖಾತರಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಈ ಆಯ್ಕೆ ನಡೆದಿದೆ.

ಸಾಣೂರು ಗ್ರಾಮ ಪಂಚಾಯತ್ (ಮೂಲಸೌಕರ್ಯ ಕ್ಷೇತ್ರದ ಪ್ರಶಸ್ತಿ):
ಗ್ರಾಮದ ಎಲ್ಲಾ ಭಾಗಗಳಲ್ಲಿ ಬೀದಿದೀಪಗಳ ಅಳವಡಿಕೆ, ಸುಸ್ಥಿರ ಕುಡಿಯುವ ನೀರಿನ ಪೂರೈಕೆ, ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಶಾಲೆ-ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವುದಕ್ಕಾಗಿ ಈ ಪ್ರಶಸ್ತಿ ಲಭಿಸಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago