Featured

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ವಿಕಾಸ್ ಪುರಸ್ಕಾರಕ್ಕೆ ರಾಜ್ಯದ ಒಟ್ಟು ಆರು ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿದ್ದು, ಈ ಪೈಕಿ ಐದು ಪಂಚಾಯತ್‌ಗಳು ಉಡುಪಿ ಜಿಲ್ಲೆಯವು ಎಂಬುದು ವಿಶೇಷ.

ಹೆಬ್ರಿ ತಾಲೂಕಿನ ಮುದ್ರಾಡಿ ಮತ್ತು ಮಡಾಮಕ್ಕಿ, ಕುಂದಾಪುರ ತಾಲೂಕಿನ ವಂಡ್ಸೆ ಮತ್ತು ಹಕ್ಲಾಡಿ, ಕಾರ್ಕಳದ ಸಾಣೂರು ಹಾಗೂ ಬೆಂಗಳೂರಿನ ಹಳನಾಯಕಹಳ್ಳಿ ಗ್ರಾಮ ಪಂಚಾಯತ್‌ಗಳು ಈ ಗೌರವಕ್ಕೆ ಪಾತ್ರವಾಗಿವೆ. ಆಯ್ಕೆಯಾದ ಪ್ರತಿ ಗ್ರಾಮ ಪಂಚಾಯತ್‌ಗೆ ಕನಿಷ್ಠ 75 ಲಕ್ಷ ರೂ. ನಿಂದ ಗರಿಷ್ಠ 1.50 ಕೋಟಿ ರೂ. ವರೆಗೆ ನಗದು ಬಹುಮಾನ ದೊರೆಯಲಿದೆ.

ಮುದ್ರಾಡಿ ಗ್ರಾಮ ಪಂಚಾಯತ್ (ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ಪಂಚಾಯತ್ ಪ್ರಶಸ್ತಿ):
ಸ್ತ್ರೀಶಕ್ತಿ ಸಂಘಗಳ ಮೂಲಕ ಸ್ವ-ಉದ್ಯೋಗಕ್ಕೆ ಉತ್ತೇಜನ, ಆಧುನಿಕ ಕೃಷಿ ಯಂತ್ರೋಪಕರಣಗಳ ಬಳಕೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ವಯಂ ಉದ್ಯೋಗ ಯೋಜನೆಗಳ ಸಮರ್ಪಕ ಅನುಷ್ಠಾನ, ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಹಾಗೂ ಪಡಿತರ ವಿತರಣೆಯಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಮಡಾಮಕ್ಕಿ ಗ್ರಾಮ ಪಂಚಾಯತ್ (ಕುಡಿಯುವ ನೀರಿನ ಸುಸ್ಥಿರ ಯೋಜನೆಯ ಪ್ರಶಸ್ತಿ):
ತನ್ನ ವ್ಯಾಪ್ತಿಯಲ್ಲಿ ನೀರಿನ ಮೂಲಗಳನ್ನು ಸಂರಕ್ಷಿಸಿರುವುದು ಮತ್ತು ಸುಸಜ್ಜಿತ ಕ್ರಮಗಳ ಮೂಲಕ ಪ್ರತಿ ಮನೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುತ್ತಿರುವುದಕ್ಕಾಗಿ ಈ ಮಾನ್ಯತೆ ದೊರೆತಿದೆ.

ವಂಡ್ಸೆ ಗ್ರಾಮ ಪಂಚಾಯತ್ (ಆರೋಗ್ಯ ಸೇವೆಗಳ ಪ್ರಶಸ್ತಿ):
ಆರೋಗ್ಯ ಕೇಂದ್ರದ ಸೇವೆಗಳು, ಘನತ್ಯಾಜ್ಯ ನಿರ್ವಹಣೆ, ಶಾಲೆ ಮತ್ತು ಅಂಗನವಾಡಿಗಳಲ್ಲಿ ಆರೋಗ್ಯ ಚಟುವಟಿಕೆಗಳು, ವಿಶೇಷ ಆರೋಗ್ಯ ಶಿಬಿರಗಳು ಹಾಗೂ ಮುಖ್ಯವಾಗಿ ‘ನೀರಾಮಯ ಸೊಸೈಟಿ’ ಮೂಲಕ ಮನೆಗಳಲಲಿರುವ ಅಶಕ್ತರಿಗೆ ನೀಡಲಾಗುತ್ತಿರುವ ಉಪಶಮನ ಆರೈಕೆ ಆರಂಭಿಸಿರುವುದನ್ನು ಗುರುತಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.

ಹಕ್ಲಾಡಿ ಗ್ರಾಮ ಪಂಚಾಯತ್ (ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಭದ್ರತೆಯುಳ್ಳ ಪಂಚಾಯತ್ ಪ್ರಶಸ್ತಿ):
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ವಿಕಲಚೇತನರು ಹಾಗೂ ದುರ್ಬಲ ವರ್ಗದವರಿಗೆ ಸರ್ಕಾರದ ಅನುದಾನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿರುವುದು, ಎಲ್ಲಾ ಕ್ಷೇತ್ರಗಳಲ್ಲಿ ಶೇ. 80 ಕ್ಕೂ ಹೆಚ್ಚು ಪ್ರಗತಿ ಸಾಧಿಸಿರುವುದು ಮತ್ತು ಉದ್ಯೋಗ ಖಾತರಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಈ ಆಯ್ಕೆ ನಡೆದಿದೆ.

ಸಾಣೂರು ಗ್ರಾಮ ಪಂಚಾಯತ್ (ಮೂಲಸೌಕರ್ಯ ಕ್ಷೇತ್ರದ ಪ್ರಶಸ್ತಿ):
ಗ್ರಾಮದ ಎಲ್ಲಾ ಭಾಗಗಳಲ್ಲಿ ಬೀದಿದೀಪಗಳ ಅಳವಡಿಕೆ, ಸುಸ್ಥಿರ ಕುಡಿಯುವ ನೀರಿನ ಪೂರೈಕೆ, ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಶಾಲೆ-ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವುದಕ್ಕಾಗಿ ಈ ಪ್ರಶಸ್ತಿ ಲಭಿಸಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

17 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

31 minutes ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago