Featured

ಉಡುಪಿ : ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ  – Vishwanews24

ಉಡುಪಿ : ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

2023 ಜನವರಿ 1 ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಐದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಜನವರಿ 5 ರಂದು ಎಲ್ಲಾ ಮತಗಟ್ಟೆಗಳಲ್ಲಿ, ಉಪ ವಿಭಾಗೀಯ, ತಾಲೂಕು ಕಚೇರಿ ಸೇರಿದಂತೆ ಜಿಲ್ಲಾಧಿಕಾರಿಯ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದರು.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,12,126 ಗಂಡಸರು, 1,17,421 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,29,550 ಮತದಾರರಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 98,224 ಗಂಡಸರು, 1,06,298 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,04,525 ಮತದಾರರಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,02,192 ಗಂಡಸರು, 1,09,439 ಮಹಿಳೆಯರು ಸೇರಿದಂತೆ ಒಟ್ಟು 2,11,631 ಮತದಾರರಿದ್ದು, ಅಲ್ಪಸಂಖ್ಯಾತ ಮತದಾರರಿರುವುದಿಲ್ಲ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ 88,114 ಗಂಡಸರು, 95,968 ಮಹಿಳೆಯರು, 6 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 1,84,088 ಮತದಾರರಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 89,404 ಗಂಡಸರು, 97,047 ಮಹಿಳೆಯರು, ಸೇರಿದಂತೆ ಒಟ್ಟು 1,86,451 ಮತದಾರರಿದ್ದಾರೆ.

ಜಿಲ್ಲೆಯ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಂದ 4,90,060 ಗಂಡಸರು, 5,26173 ಮಹಿಳೆಯರು, 12 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 10,16,245 ಮತದಾರರಿದ್ದಾರೆ ಎಂದರು. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅವಧಿಯಲ್ಲಿ ಹೊಸದಾಗಿ 16,827 ಮತದಾರರು ಸೇರ್ಪಡೆಯಾದರೆ, 5783 ಮತದಾರರನ್ನು ತೆಗೆದುಹಾಕಲಾಗಿದೆ. 13,321 ತಿದ್ದುಪಡಿ ಹಾಗೂ ವರ್ಗಾವಣೆಗೊಳಿಸಲಾಗಿದೆ. ಈ ಬಾರಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ 13,816 ಯುವ ಮತದಾರರು ಹಾಗೂ 11,331 ವಿಶೇಷ ಚೇತನರು ನೋಂದಣಿಯಾಗಿರುತ್ತಾರೆ ಎಂದರು. ಮತದಾರರ ಪಟ್ಟಿಗೆ ಸಂಬAದಿಸಿದ ಮಾಹಿತಿಗಳನ್ನು ಸಾರ್ವಜನಿಕರು ಪಡೆಯುವ ಸಲುವಾಗಿ , ಉಡುಪಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರ ತೆರೆದು ಸಾರ್ವಜನಿಕರು ಮಾಹಿತಿಗಳನ್ನು ಉಚಿತವಾಗಿ ಕರೆಗಳ ಮೂಲಕ ಪಡೆಯಲು ಟೋಲ್ ಪ್ರೀ ಸಂಖ್ಯೆ 1950 ಅಳವಡಿಸಲಾಗಿದೆ ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದರು. ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣ ಕಾರ್ಯಕ್ರಮವನ್ನು ಅಜ್ಜರಕಾಡು ಪುರಭವನದಲ್ಲಿ ನಡೆಯುತ್ತಿದ್ದು, ಅದೇ ರೀತಿಯಲ್ಲಿ ತಾಲೂಕು ಮತ್ತು ಕತಗಟ್ಟೆಗಳ ವ್ಯಪ್ತಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೆಕು ಎಂದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

13 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

14 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

14 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

14 hours ago